‘ಮೈಸೂರು ರಸ್ತೆಯಲ್ಲಿ ಜಮೀನು ಖರೀದಿಸಿದ್ದು, ಅದನ್ನು ಅಭಿವೃದ್ಧಿಪಡಿಸುತ್ತಿದ್ದೇನೆ. ಈ ವ್ಯವಹಾರದಲ್ಲಿ ಹಣ ತೊಡಗಿಸಿದರೆ, ನಿಮಗೆ ಒಳ್ಳೆಯ ಲಾಭ ಬರಲಿದೆ. ಸಿನಿಮಾ ನಿರ್ಮಾಣ ಮತ್ತು ವಿತರಣೆಗಾಗಿ ಹೂಡಿಕೆ ಮಾಡಿದರೂ ಅಧಿಕ ಲಾಭ ಗಳಿಸಬಹುದು’ ಎಂದು ಹೇಳಿ ಸುಧಾಕರ್, ಉದ್ಯಮಿಗಳಿಂದ ಹಣ ಪಡೆದಿದ್ದ. ನಂತರ, ತಲೆಮರೆಸಿಕೊಂಡಿದ್ದ. ಮೊಬೈಲ್ ಕರೆಗಳ ವಿವರ ಸಂಗ್ರಹಿಸಿ ಆತ ಹಾಗೂ ಸ್ನೇಹಿತರನ್ನು ಸೆರೆ ಹಿಡಿಯಲಾಯಿತು’ ಎಂದು ಪೊಲೀಸರು ಮಾಹಿತಿ ನೀಡಿದರು.