‘ಆಂಧ್ರಪ್ರದೇಶದಿಂದ ಗಾಂಜಾ ತರುತ್ತಿದ್ದ ಆರೋಪಿಗಳು ಅದನ್ನು ಹಳೇ ಹುಬ್ಬಳ್ಳಿ, ಹಳಿಯಾಳ, ದಾಂಡೇರಿ ಮುಂತಾದೆಡೆ ಮಾರಾಟ ಮಾಡುತ್ತಿದ್ದರು. ಸ್ಥಳೀಯರನ್ನು ಇದಕ್ಕಾಗಿ ಬಳಸಿಕೊಳ್ಳುತ್ತಿದ್ದರು. ಬಸ್ ಮತ್ತು ರೈಲಿನ ಮೂಲಕ ಸಾಗಣೆ ಮಾಡುತ್ತಿದ್ದರು. ಆದ್ದರಿಂದ ರೈಲ್ವೆ ರಕ್ಷಣಾ ದಳದ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿ ಹೆಚ್ಚಿನ ನಿಗಾ ವಹಿಸುವಂತೆ ಮನವಿ ಮಾಡಲಾಗಿದೆ. ರೈಲ್ವೆ ಪೊಲೀಸರಿಗೂ ಪತ್ರ ಬರೆಯಲಾಗಿದೆ’ ಎಂದರು.