ಕಂಪನಿಯನ್ನು ಸರ್ಕಾರದ ವಶಕ್ಕೆ ಪಡೆಯುವ ಸಂಬಂಧ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಉಪಸ್ಥಿತಿಯಲ್ಲಿ ಮಂಗಳವಾರ ನಡೆದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮುನಿಯಪ್ಪ, ‘ಹಸ್ತಾಂತರಿಸುವ ಮೊದಲು ₹ 1,600 ಕೋಟಿ ಬಾಕಿ ಪಾವತಿಸಬೇಕು ಎಂದು ಕೇಂದ್ರ ಷರತ್ತು ವಿಧಿಸಿದೆ. ಆದರೆ, ಅಷ್ಟೂ ಹಣವನ್ನು ವಜಾ ಮಾಡಿ ಭೂಮಿಯನ್ನು ಉಚಿತವಾಗಿ ನೀಡಬೇಕು ಎನ್ನುವುದು ರಾಜ್ಯದ ಬೇಡಿಕೆ’ ಎಂದರು.