ಬೆಂಗಳೂರು: ಬಹುತೇಕ ಎಲ್ಲ ಗ್ರಾಮಪಂಚಾಯಿತಿಗಳು ಐದು ವರ್ಷಗಳ ಅಧಿಕಾರ ಅವಧಿ ಪೂರ್ಣಗೊಳಿಸಿರುವುದರಿಂದ ಮತ್ತು ಸಾರ್ವತ್ರಿಕ ಚುನಾವಣೆ ನಡೆಯದೇ ಇರುವುದರಿಂದ ಆಡಳಿತಾಧಿಕಾರಿಗಳನ್ನು ನೇಮಿಸಲುಆದೇಶ ಹೊರಡಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಪ್ರಧಾನಕಾರ್ಯದರ್ಶಿಯವರು ಬುಧವಾರ ಈ ಕುರಿತು ಆದೇಶ ಮಾಡಿದ್ದಾರೆ. ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ತೀರ್ಮಾನತೆಗೆದುಕೊಳ್ಳಲಾಗಿತ್ತು.ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಆಡಳಿತಾಧಿಕಾರಿಗಳು ಇರುತ್ತಾರೆ.