ಕಾಂಗ್ರೆಸ್ ಮುಖಂಡ ಎಚ್.ಆಂಜನೇಯ, ‘ದೇಶದಲ್ಲಿ ಫ್ಯಾಸಿಸ್ಟ್ ಶಕ್ತಿಗಳ ದಬ್ಬಾಳಿಕೆ ಮಿತಿ ಮೀರಿದೆ. ಕೇಂದ್ರದಲ್ಲಿರುವ ಮನುವಾದಿ ಸರ್ಕಾರವು ವ್ಯವಸ್ಥೆ ವಿರುದ್ಧ ಮತ್ತು ಆಡಳಿತ ವರ್ಗದ ವಿರುದ್ಧ ಮಾತನಾಡುವ, ಬರೆಯುವವರನ್ನು ಹಾಗೂ ಹೋರಾಟಗಾರರನ್ನು ಜೈಲಿಗೆ ತಳ್ಳುವ ಹುನ್ನಾರ ನಡೆಸುತ್ತಿದೆ. ಈ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.