ಸಕಲೇಶಪುರ: ‘ನನಗೆ ರಾಜಕೀಯ ಶಕ್ತಿ ತುಂಬಿರುವ ಹಾಸನದ ನೆಲದಲ್ಲಿಯೇ ಮಣ್ಣಾಗುತ್ತೇನೆ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಇಲ್ಲಿ ಬುಧವಾರ ಭಾವುಕರಾಗಿ ಹೇಳಿದರು.
ತಾಲ್ಲೂಕಿನ ಹಾನುಬಾಳು ಹೋಬಳಿ ಕೇಂದ್ರ ಹಾಗೂ ಪಟ್ಟಣದಲ್ಲಿ ನಡೆದ ಪ್ರಚಾರ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.
‘ಹಾಸನ ನನ್ನ ಕರ್ಮಭೂಮಿ, ನೀವು ನನ್ನನ್ನು ಬೆಳೆಸಿ ರಾಜಕೀಯ ಶಕ್ತಿ ತುಂಬಿದ್ದೀರಿ. ಅನ್ಯತಾ ಭಾವಿಸಬೇಡಿ, ಅನಿವಾರ್ಯ ಕಾರಣಗಳಿಂದ ಕ್ಷೇತ್ರ ಬಿಟ್ಟು ಹೋಗಬೇಕಾಗಿದೆ. ಜಿಲ್ಲೆ ಹಾಗೂ ರಾಜ್ಯದ ಋಣ ಯಾವತ್ತೂ ಮರೆಯುವುದಿಲ್ಲ’ ಎಂದರು.