ಬೆಂಗಳೂರು: ವಿಶ್ವಾಸ ಮತದ ವೇಳೆ ಸಂಕಷ್ಟದಿಂದ ಪಾರು ಮಾಡು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೇವರ ಮೊರೆ ಹೋಗಿದ್ದರೆ, ಇನ್ನೊಂದೆಡೆ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನಿಗಳು ರಾಜ್ಯದ ಹಲವು ಕಡೆಗಳಲ್ಲಿ ಪೂಜೆ– ಪುನಸ್ಕಾರದಲ್ಲಿ ತೊಡಗಿದ್ದಾರೆ.
ಮಂಗಳವಾರ ಗುರುಪೂರ್ಣಿಮೆ ಮತ್ತು ಚಂದ್ರ ಗ್ರಹಣವಾಗಿದ್ದರಿಂದ ಕುಮಾರಸ್ವಾಮಿ ತ್ಯಾಗರಾಜನಗರದ ದತ್ತಾತ್ರೇಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ಯಡಿಯೂರಪ್ಪ ಅವರು ಮುಂದಿನ ಮುಖ್ಯಮಂತ್ರಿ ಆಗುವಂತೆ ಪ್ರಾರ್ಥಿಸಿ ಅವರ ಅಭಿಮಾನಿಗಳಿಂದ ಪೂಜೆಗಳೂ ನಡೆದವು.