ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುತ್ತಿಗೆ ಆಟೊ ಟಿಪ್ಪರ್ ಚಾಲಕರ ಪ್ರತಿಭಟನೆ

Last Updated 5 ಮಾರ್ಚ್ 2019, 15:54 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಗುತ್ತಿಗೆದಾರರು ಐದು ತಿಂಗಳಿನಿಂದ ವೇತನ ನೀಡಿಲ್ಲ ಎಂದು ಆರೋಪಿಸಿ ಹುಬ್ಬಳ್ಳಿ– ಧಾರವಾಡ ಮಹಾನಗರ ಪಾಲಿಕೆ ಹೊರಗುತ್ತಿಗೆ ಪೌರ ವಾಹನ ಚಾಲಕರ ಸಂಘದ ಸದಸ್ಯರು ಪಾಲಿಕೆ ಕೇಂದ್ರ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಸಂಬಳ ನೀಡದ ಕಾರಣ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಪಾಲಿಕೆ ಆಧಿಕಾರಿಗಳನ್ನು ಕೇಳಿದರೆ ಗುತ್ತಿಗೆದಾರರನ್ನು ಕೇಳಿ ಎನ್ನುತ್ತಾರೆ, ಗುತ್ತಿಗೆದಾರರು ವೇತನ ನೀಡುತ್ತಿಲ್ಲ. ವಾಹನಗಳು ಸಣ್ಣಪುಟ್ಟ ರಿಪೇರಿಗೆ ಬಂದರೆ ನಾವೇ ಖರ್ಚು ಮಾಡಿ ರಿಪೇರಿ ಮಾಡಿಸಬೇಕಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಗುತ್ತಿಗೆದಾರರು ಇಎಸ್‌ಐ ಹಾಗೂ ಪಿಎಫ್ ಸೌಲಭ್ಯ ನೀಡಿಲ್ಲ. ಅನಾರೋಗ್ಯ ಮತ್ತು ತುರ್ತು ಸಂದರ್ಭಗಳಲ್ಲಿ ರಜೆಯನ್ನು ಸಹ ನೀಡುತ್ತಿಲ್ಲ. 150 ವಾಹನಗಳಿಗ ಕೇವಲ ಇಬ್ಬರು ಹೆಚ್ಚುವರಿ ಚಾಲಕರು ಇದ್ದಾರೆ. ವಾಸ್ತವವಾಗಿ ಒಂದು ವಾಹನಕ್ಕೆ ಇಬ್ಬರು ಲೋಡರ್ ಬೇಕು. ಆದರೆ ಕೆಲವು ವಾಹನಗಳಿಗೆ ಒಬ್ಬರನ್ನೇ ನೀಡುತ್ತಿದ್ದಾರೆ ಎಂದು ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಕಾ ಬಿಜವಾಡ ದೂರಿದರು.

ಉಪಾಧ್ಯಕ್ಷ ಆನಂದ್ ಎಸ್ ದೊಡಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT