ಹುಬ್ಬಳ್ಳಿ: ಪ್ರತಿ ದಿನ ಉತ್ಪತ್ತಿಯಾಗುವ ಕಸ ವಿಲೇವಾರಿಗೆ ಹಲವು ಕ್ರಮ ಕೈಗೊಂಡಿರುವ ಹುಬ್ಬಳ್ಳಿ– ಧಾರವಾಡ ಮಹಾನಗರ ಪಾಲಿಕೆ, ತ್ಯಾಜ್ಯದ ಪ್ರಮಾಣವನ್ನು ಮೂಲದಲ್ಲಿಯೇ ಕಡಿಮೆ ಮಾಡುವತ್ತ ಚಿತ್ತ ಹರಿಸಿದೆ. ಅದಕ್ಕಾಗಿ, ಮನೆಯಲ್ಲಿ ಸಂಗ್ರಹವಾಗುವ ಹಸಿ ಕಸವನ್ನು ಗೊಬ್ಬರವಾಗಿ ಪರಿವರ್ತಿಸುವ ಪ್ರಾತ್ಯಕ್ಷಿಕೆ ನೀಡುತ್ತಿದೆ. ಭಗೀರಥ ಎಂಬ ಖಾಸಗಿ ಸಂಸ್ಥೆಗೆ ಈ ಜವಾಬ್ದಾರಿ ವಹಿಸಲಾಗಿದ್ದು, ಈಗಾಗಲೇ 12 ಕಡೆ ಪ್ರಾತ್ಯಕ್ಷಿಕೆ ನೀಡಲಾಗಿದೆ.