ತೆಂಗು ಅಭಿವೃದ್ಧಿ ಮಂಡಳಿ ಅಧಿಕಾರಿಗಳು ಈ ಹಣದಿಂದ ತೋಟಗಾರಿಕೆ ಉಪಕರಣಗಳನ್ನು ಖರೀದಿಸಿದ್ದರು. ಅನಧಿಕೃತ ವಿತರಕರಿಂದ ಖರೀದಿಸಿದ್ದ ಉಪಕರಣಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸದೆ, ನಕಲಿ ದಾಖಲೆ ಸೃಷ್ಟಿಸಿದ್ದರು. ಈ ಸಂಬಂಧ ಸಿಬಿಐ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಲಾಗಿತ್ತು. ಆರೋಪಿಗಳು ಭಾರತ ದಂಡಸಂಹಿತೆ ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಅಪರಾಧ ಎಸಗಿದ್ದು ತನಿಖೆಯಿಂದ ಖಚಿತವಾಗಿದೆ. ಪ್ರಕರಣದಲ್ಲಿ ಇನ್ನೂ ಕೆಲವು ಅಧಿಕಾರಿಗಳು ಭಾಗಿಯಾಗಿರುವುದು ಕಂಡುಬಂದಿದೆ.