ನೆಲಮಂಗಲ:ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ಎನ್.ಪಿ. ಹೇಮಂತಕುಮಾರ್ ಬುಧವಾರ ಅಧಿಕಾರ ಸ್ವೀಕರಿಸಿದರು.
ಬಳಿಕ ಮಾತನಾಡಿದ ಅವರು, ‘ಪಟ್ಟಣದ ಕೆರೆಗೆ ಸೇರುತ್ತಿರುವ ಚರಂಡಿ ನೀರನ್ನು ಶುದ್ಧೀಕರಿಸಿ ಬಿಡಲು ಯೋಜಿಸಿದ್ದು, ಶೀಘ್ರದಲ್ಲೆ ಜಲ ಶುದ್ಧೀಕರಣ ಘಟಕ ನಿರ್ಮಿಸಲಾಗುವುದು’ ಎಂದು ಹೇಳಿದರು. ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ, ವಿಧಾನ ಪರಿಷತ್ ಸದಸ್ಯ ಬಿ.ಎಂ.ಎಲ್.ಕಾಂತರಾಜು ಇದ್ದರು.