<p><strong>ಬೆಂಗಳೂರು:</strong> ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಚಿಕ್ಕಬಾಣಾವರ ಗ್ರಾಮದ ಯಶಸ್ ವಿದ್ಯಾಕೇಂದ್ರದಲ್ಲಿ ಆದ್ಯ ಸರ್ವೀಸ್ ಮತ್ತು ವೆಲೆಫೇರ್ ಟ್ರಸ್ಟ್ ವತಿಯಿಂದ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.</p>.<p>ಗಾಣಿಗಾರಹಳ್ಳಿ, ಕೆಂಪಾಪುರ, ಕೆರೆಗುಡ್ಡಹಳ್ಳಿ, ಸೋಲದೇವನಹಳ್ಳಿ, ಲಕ್ಷ್ಮೀಪುರ, ಕಬ್ಬೆಪಾಳ್ಯ ಗ್ರಾಮಸ್ಥರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. 1,470 ಜನರು ಭಾಗವಹಿಸಿದ್ದರು. ಮಧುಮೇಹ, ರಕ್ತದ ಒತ್ತಡ ಪರೀಕ್ಷಿಸಲಾಯಿತು, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡಲಾಯಿತು.</p>.<p>ಶಿಬಿರವನ್ನು ಉದ್ಘಾಟಿಸಿದ ದಾಸರಹಳ್ಳಿ ಶಾಸಕ ಆರ್.ಮಂಜುನಾಥ್, ‘ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗದ ಎರಡನೇಯ ಆರೋಗ್ಯ ಶಿಬಿರ ಇದಾಗಿದೆ. ತೀರ ಆರ್ಥಿಕವಾಗಿ ಹಿಂದುಳಿದವರಿಗಾಗಿ ಶಿಬಿರ ಆಯೋಜಿಸಲಾಗಿದೆ ಎಂದರು. <br />ಶಿಬಿರದಲ್ಲಿ ಏಳು ಬಡ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಕಂಡು ಬಂದಿದೆ. ಈ ಚಿಕಿತ್ಸೆಯ ಶೇ 60ರಷ್ಟು ವೆಚ್ಚ ಭರಿಸುವುದಾಗಿ ಶಾಸಕರು ಹಾಗೂ ಲಯನ್ಸ್ ಕ್ಲಬ್ ಪದಾಧಿಕಾರಿಗಳು ಭರವಸೆ ನೀಡಿದರು.</p>.<p>ಮ್ಯಾನೇಜಿಂಗ್ ಟ್ರಸ್ಟಿ ಕಿರಣ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಚಿಕ್ಕಬಾಣಾವರ ಗ್ರಾಮದ ಯಶಸ್ ವಿದ್ಯಾಕೇಂದ್ರದಲ್ಲಿ ಆದ್ಯ ಸರ್ವೀಸ್ ಮತ್ತು ವೆಲೆಫೇರ್ ಟ್ರಸ್ಟ್ ವತಿಯಿಂದ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.</p>.<p>ಗಾಣಿಗಾರಹಳ್ಳಿ, ಕೆಂಪಾಪುರ, ಕೆರೆಗುಡ್ಡಹಳ್ಳಿ, ಸೋಲದೇವನಹಳ್ಳಿ, ಲಕ್ಷ್ಮೀಪುರ, ಕಬ್ಬೆಪಾಳ್ಯ ಗ್ರಾಮಸ್ಥರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. 1,470 ಜನರು ಭಾಗವಹಿಸಿದ್ದರು. ಮಧುಮೇಹ, ರಕ್ತದ ಒತ್ತಡ ಪರೀಕ್ಷಿಸಲಾಯಿತು, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡಲಾಯಿತು.</p>.<p>ಶಿಬಿರವನ್ನು ಉದ್ಘಾಟಿಸಿದ ದಾಸರಹಳ್ಳಿ ಶಾಸಕ ಆರ್.ಮಂಜುನಾಥ್, ‘ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗದ ಎರಡನೇಯ ಆರೋಗ್ಯ ಶಿಬಿರ ಇದಾಗಿದೆ. ತೀರ ಆರ್ಥಿಕವಾಗಿ ಹಿಂದುಳಿದವರಿಗಾಗಿ ಶಿಬಿರ ಆಯೋಜಿಸಲಾಗಿದೆ ಎಂದರು. <br />ಶಿಬಿರದಲ್ಲಿ ಏಳು ಬಡ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಕಂಡು ಬಂದಿದೆ. ಈ ಚಿಕಿತ್ಸೆಯ ಶೇ 60ರಷ್ಟು ವೆಚ್ಚ ಭರಿಸುವುದಾಗಿ ಶಾಸಕರು ಹಾಗೂ ಲಯನ್ಸ್ ಕ್ಲಬ್ ಪದಾಧಿಕಾರಿಗಳು ಭರವಸೆ ನೀಡಿದರು.</p>.<p>ಮ್ಯಾನೇಜಿಂಗ್ ಟ್ರಸ್ಟಿ ಕಿರಣ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>