ಬೆಂಗಳೂರು: ಸರಕು ಸಾಗಾಣಿಕೆ ವಾಹಗಳಲ್ಲಿ ವಿದ್ಯಾರ್ಥಿಗಳು, ಮಕ್ಕಳು, ಕಾರ್ಮಿಕರು ಸೇರಿದಂತೆ ಪ್ರಯಾಣಿಕರನ್ನು ಕೊಂಡೊಯ್ಯುವುದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರನ್ನೂ ಪ್ರತಿವಾದಿಯನ್ನಾಗಿ ಮಾಡುವಂತೆ ಹೈಕೋರ್ಟ್ ನಿರ್ದೇಶಿಸಿದೆ.