ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್, ‘ರಕ್ಷಕ ಸೇನಾ ಹೆಸರಿನ ರಾಜಕೀಯ ಪಕ್ಷವನ್ನು ಅರ್ಜಿದಾರರು ಸ್ಥಾಪಿಸಿದ್ದಾರೆ. ಈ ಪಕ್ಷದ ಪ್ರಚಾರಕ್ಕೆ ಅವಕಾಶ ಕೋರಿದ ಅರ್ಜಿಯನ್ನು ಆರು ವಾರಗಳಲ್ಲಿ ಪರಿಗಣಿಸಿ ಎಂದು ಏಕಸದಸ್ಯ ನ್ಯಾಯಪೀಠ ಪೊಲೀಸರಿಗೆ ಆದೇಶಿಸಿತ್ತು. ಈ ಆದೇಶದಂತೆ ಡಿ.ಜಿ ಮತ್ತು ಐ.ಜಿ. ಹಾಗೂ ಬೆಂಗಳೂರು ನಗರ ಕಮಿಷನರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಈ ಮನವಿಯನ್ನು ಪರಿಗಣಿಸಿಲ್ಲ’ ಎಂದರು.