ಸಮಾಜದ ಹಿತಾಸಕ್ತಿಯನ್ನು ಕಾಪಾಡುವ ಮೌಲ್ಯಗಳನ್ನು ಕಾಂಗ್ರೆಸ್ ಪಕ್ಷ ಹೊಂದಿದೆ. ದೇಶದಲ್ಲಿ ಬಡತನವನ್ನು ಹೋಗಲಾಡಿಸಬೇಕು ಎನ್ನುವ ಮೂಲ ಗುರಿಯನ್ನು ಇಂದಿರಾ ಗಾಂಧಿ ಹೊಂದಿದ್ದರು. ಅದೇ ಆದರ್ಶವನ್ನು ಮುಂದುವರೆಸಿಕೊಂಡು ಬಂದಿರುವ ಕಾಂಗ್ರೆಸ್ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ‘ನ್ಯಾಯ’ ಯೋಜನೆ ಘೋಷಿಸಿದೆ. ಬೇರೆ ಪಕ್ಷಗಳು ಊಹಿಸಲೂ ಸಾಧ್ಯವಿಲ್ಲದಂತಹ ಕಾರ್ಯಕ್ರಮ ಇದಾಗಿದೆ. ಬಡತನ ರೇಖೆಗಿಂತ ಕೆಳಗಿರುವವರನ್ನು ಮಧ್ಯಮವರ್ಗಕ್ಕೆ ಮೇಲೆತ್ತುವಂತ ಯೋಜನೆ ಇದಾಗಿದೆ ಎಂದರು.