ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತಿ ಮರ್ಯಾದೆಗೇಡು ಹತ್ಯೆ; ಮನನೊಂದು ಪತ್ನಿ ಆತ್ಮಹತ್ಯೆ

Last Updated 6 ಡಿಸೆಂಬರ್ 2018, 19:53 IST
ಅಕ್ಷರ ಗಾತ್ರ

ದೇವನಹಳ್ಳಿ: ಪತಿ ಮರ್ಯಾದೆಗೇಡು ಹತ್ಯೆಯಿಂದ ಮನನೊಂದು ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿದಲೂರು ಗ್ರಾಮದಲ್ಲಿ ಗುರುವಾರ ನಡೆದಿದೆ. ಮೀನಾಕ್ಷಿ (22) ಆತ್ಮಹತ್ಯೆ ಮಾಡಿಕೊಂಡವರು.

ಬಿದಲೂರಿನ ಹರೀಶ್ ಎಂಬುವರನ್ನು ಕಳೆದ ಒಂಬತ್ತು ತಿಂಗಳ ಹಿಂದೆ, ಅವರು ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದರು. ಇದಕ್ಕೆ ಕುಟುಂಬದ ಆಕ್ಷೇಪ ಇತ್ತು. ಹರೀಶ್‌ ಅವರನ್ನು ಮೀನಾಕ್ಷಿ ಅವರ ಸೋದರ ಈಚೆಗೆ ನಲ್ಲೂರು ಗ್ರಾಮದ ಗುಲಾಬಿ ತೋಟದಲ್ಲಿ ಹತ್ಯೆ ಮಾಡಿದ್ದರು. ಇದರಿಂದ ಖಿನ್ನತೆಗೆ ಒಳಗಾಗಿದ್ದ ಮೀನಾಕ್ಷಿ, ಡೆತ್ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT