ಸಾಧ್ಯವಿಲ್ಲ: ‘ವೈದ್ಯರು ತಮ್ಮ ವೃತ್ತಿಯಲ್ಲಿ ಏನಾದರೂ ದುರಾಚಾರ ನಡೆಸಿದ್ದು ಕಂಡು ಬಂದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಕರ್ನಾಟಕ ವೈದ್ಯಕೀಯ ಮಂಡಳಿ ಸಕ್ಷಮ ಪ್ರಾಧಿಕಾರ ಎನಿಸಿದೆ. ಹೀಗಾಗಿ ಅಂತಹ ಆರೋಪಗಳಿದ್ದರೆ ಅಲ್ಲಿಯೇ ಪರಿಹಾರ ಪಡೆಯಬಹುದು. ಆದ್ದರಿಂದ ಅರ್ಜಿದಾರರ ಮನವಿಯನ್ನು ಪರಿಗಣಿಸಲು ಸಾಧ್ಯವಿಲ್ಲ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.