ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್‌ಸ್ಪೆಕ್ಟರ್ ಟಿ.ಡಿ.ರಾಜು ಸಾವು

Last Updated 4 ಮಾರ್ಚ್ 2019, 19:57 IST
ಅಕ್ಷರ ಗಾತ್ರ

ಬೆಂಗಳೂರು: ಕುಮಾರಸ್ವಾಮಿ ಲೇಔಟ್ ಬಳಿ ಸಂಭವಿಸಿದ್ದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿಶೇಷ ಕಾರ್ಯಪಡೆಯ (ಎಸ್‌ಟಿಎಫ್‌) ಇನ್‌ಸ್ಪೆಕ್ಟರ್ ಟಿ.ಡಿ.ರಾಜು ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾಗರ್ ಆಸ್ಪತ್ರೆಯಲ್ಲಿ ಸೋಮವಾರ ಅಸುನೀಗಿದ್ದಾರೆ.

ಕನಕಪುರ ರಸ್ತೆಯ ನಾರಾಯಣ ನಗರದಲ್ಲಿ ವಾಸವಿದ್ದ ರಾಜು, ಫೆ. 25ರಂದು ಬೆಳಿಗ್ಗೆ ಟಿ.ವಿ. ಕ್ಲಬ್‌ಗೆ ಸ್ಕೂಟರ್‌ನಲ್ಲಿ ಹೋಗಿದ್ದರು. ಅಲ್ಲಿಂದ ವಾಪಸ್‌ ಮನೆಗೆ ಬರುತ್ತಿದ್ದ ವೇಳೆ ಅವರ ಸ್ಕೂಟರ್‌ಗೆ ಶಾಲಾ ವಾಹನವೊಂದು ಡಿಕ್ಕಿ ಹೊಡೆದಿತ್ತು.

ಅಪಘಾತದಿಂದಾಗಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತ ಬಿದ್ದಿದ್ದ ರಾಜು ಅವರನ್ನು ಸಾಗರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶಕ್ಕೆ ಪೆಟ್ಟು ಬಿದ್ದಿದ್ದರಿಂದಾಗಿ ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT