<p><strong>ಮೈಸೂರು:</strong> ಅತ್ಯಾಚಾರ ಸಂತ್ರಸ್ತೆಯೊಬ್ಬರಿಂದ, ಇಲ್ಲಿನ ಮೇಟಗಳ್ಳಿ ಠಾಣೆ ಇನ್ಸ್ಪೆಕ್ಟರ್ ರಾಘವೇಂದ್ರ ಮತ್ತು ಕಾನ್ಸ್ಟೆಬಲ್ ಭೀಮಣ್ಣ ₹75 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಬುಧವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ವಸತಿ ಗೃಹವೊಂದರಲ್ಲಿ ಹಣ ಪಡೆಯುತ್ತಿದ್ದಾಗ ದಾಳಿ ನಡೆಸಿದ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.</p>.<p>‘ಅತ್ಯಾಚಾರ ನಡೆಸಿದ್ದ ಆರೋಪಿಯನ್ನು ಬಂಧಿಸಲು ಮೊದಲಿಗೆ ಇನ್ಸ್ಪೆಕ್ಟರ್ ರಾಘವೇಂದ್ರ ₹1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಸಂತ್ರಸ್ತೆ ಹಣ ನೀಡಲಿಲ್ಲ. ನಂತರ, ಆರೋಪಿಯು ಜಾಮೀನು ತೆಗೆದುಕೊಂಡ. ದೋಷಾರೋಪ ಪಟ್ಟಿಯಲ್ಲಿ ಕಠಿಣವಾದ ಸೆಕ್ಷನ್ಗಳನ್ನು ಹಾಕಬೇಕಾದರೆ, ಜಾಮೀನು ರದ್ದುಗೊಳಿಸಬೇಕಾದರೆ ಹಣ ನೀಡಲೇಬೇಕು ಎಂದು ಠಾಣೆಯ ಇನ್ಸ್ಪೆಕ್ಟರ್, ಕಾನ್ಸ್ಟೆಬಲ್ ಮೂಲಕ ಬೇಡಿಕೆ ಇಟ್ಟಿದ್ದಾರೆ. ಈ ಹಂತದಲ್ಲಿ, ಸಂತ್ರಸ್ತೆಯ ಸೋದರ ವಿಷಯವನ್ನು ಎಸಿಬಿ ಗಮನಕ್ಕೆ ತಂದಿದ್ದಾರೆ. ನಗರದ ಹೊರವಲಯದ ವಸತಿ ಗೃಹವೊಂದರಲ್ಲಿ ₹75 ಸಾವಿರ ನೀಡುವಾಗ ಬಂಧಿಸಲಾಯಿತು’ ಎಂದು ಎಸಿಬಿ ಎಸ್ಪಿ ರಶ್ಮಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಎಸಿಬಿ ಡಿವೈಎಸ್ಪಿ ಪರಶುರಾಮಪ್ಪ, ಇನ್ಸ್ಪೆಕ್ಟರ್ಗಳಾದ ನಿರಂಜನ್ ಮತ್ತು ಕರೀಂ ರಾವ್ಸರ್ ನೇತೃತ್ವದಲ್ಲಿ ದಾಳಿ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಅತ್ಯಾಚಾರ ಸಂತ್ರಸ್ತೆಯೊಬ್ಬರಿಂದ, ಇಲ್ಲಿನ ಮೇಟಗಳ್ಳಿ ಠಾಣೆ ಇನ್ಸ್ಪೆಕ್ಟರ್ ರಾಘವೇಂದ್ರ ಮತ್ತು ಕಾನ್ಸ್ಟೆಬಲ್ ಭೀಮಣ್ಣ ₹75 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಬುಧವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ವಸತಿ ಗೃಹವೊಂದರಲ್ಲಿ ಹಣ ಪಡೆಯುತ್ತಿದ್ದಾಗ ದಾಳಿ ನಡೆಸಿದ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.</p>.<p>‘ಅತ್ಯಾಚಾರ ನಡೆಸಿದ್ದ ಆರೋಪಿಯನ್ನು ಬಂಧಿಸಲು ಮೊದಲಿಗೆ ಇನ್ಸ್ಪೆಕ್ಟರ್ ರಾಘವೇಂದ್ರ ₹1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಸಂತ್ರಸ್ತೆ ಹಣ ನೀಡಲಿಲ್ಲ. ನಂತರ, ಆರೋಪಿಯು ಜಾಮೀನು ತೆಗೆದುಕೊಂಡ. ದೋಷಾರೋಪ ಪಟ್ಟಿಯಲ್ಲಿ ಕಠಿಣವಾದ ಸೆಕ್ಷನ್ಗಳನ್ನು ಹಾಕಬೇಕಾದರೆ, ಜಾಮೀನು ರದ್ದುಗೊಳಿಸಬೇಕಾದರೆ ಹಣ ನೀಡಲೇಬೇಕು ಎಂದು ಠಾಣೆಯ ಇನ್ಸ್ಪೆಕ್ಟರ್, ಕಾನ್ಸ್ಟೆಬಲ್ ಮೂಲಕ ಬೇಡಿಕೆ ಇಟ್ಟಿದ್ದಾರೆ. ಈ ಹಂತದಲ್ಲಿ, ಸಂತ್ರಸ್ತೆಯ ಸೋದರ ವಿಷಯವನ್ನು ಎಸಿಬಿ ಗಮನಕ್ಕೆ ತಂದಿದ್ದಾರೆ. ನಗರದ ಹೊರವಲಯದ ವಸತಿ ಗೃಹವೊಂದರಲ್ಲಿ ₹75 ಸಾವಿರ ನೀಡುವಾಗ ಬಂಧಿಸಲಾಯಿತು’ ಎಂದು ಎಸಿಬಿ ಎಸ್ಪಿ ರಶ್ಮಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಎಸಿಬಿ ಡಿವೈಎಸ್ಪಿ ಪರಶುರಾಮಪ್ಪ, ಇನ್ಸ್ಪೆಕ್ಟರ್ಗಳಾದ ನಿರಂಜನ್ ಮತ್ತು ಕರೀಂ ರಾವ್ಸರ್ ನೇತೃತ್ವದಲ್ಲಿ ದಾಳಿ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>