‘ಜವಾಹರ ಲಾಲ್ ನೆಹರೂ ಓಲೈಕೆ ನಂತರ, ಕಾಶ್ಮೀರವು ಭಾರತದಲ್ಲಿಯೇ ಇರುವಂತೆ ಶೇಖ್ ಅಬ್ದುಲ್ಲಾ ಕ್ರಮ ಕೈಗೊಂಡರು. ಮುಂದೆ, ನೆಹರೂ ಜೊತೆಗಿನ ಭಿನ್ನಾಭಿಪ್ರಾಯದ ನಂತರ ಅಬ್ದುಲ್ಲಾ ಅವರು ಹತ್ತು ವರ್ಷ ಜೈಲಿನಲ್ಲಿ ಕಳೆದು ಪಾಕಿಸ್ತಾನಕ್ಕೆ ಹೋದಾಗ, ಕಾಶ್ಮೀರವನ್ನು ಬೇಕೆಂದು ಪಾಕಿಸ್ತಾನ ಅವರಿಗೆ ಕೋರಿತ್ತು. ನಾನು ಜಾತ್ಯತೀತವಾದಿ. ನಿಮ್ಮ ಇಸ್ಲಾಮಿಕ್ ಸಿದ್ಧಾಂತದ ಜೊತೆ ನಾನು ಬರುವುದಿಲ್ಲ. ನಾನು ಸತ್ತರೂ ಅದು ಭಾರತದಲ್ಲಿಯೇ ಎಂದಿದ್ದರು’ ಎಂದು ಸುಗತ ಹೇಳಿದರು.