ಮೈಸೂರು, ಬಾಗಲಕೋಟೆ, ಚಾಮರಾಜನಗರ, ಕೊಪ್ಪಳದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಿದ್ದರಾಮಯ್ಯ ರೂಪಿಸಿದ್ದ ಕಾರ್ಯತಂತ್ರ ವಿಫಲವಾಗಿದೆ. ಕ್ಷೇತ್ರ ಹಂಚಿಕೆ ವೇಳೆ ಮೈಸೂರು ಕ್ಷೇತ್ರಕ್ಕೆ ಸಿದ್ದರಾಮಯ್ಯ ಪಟ್ಟುಹಿಡಿದಿದ್ದರು. ಕಾಂಗ್ರೆಸ್ ಅಭ್ಯರ್ಥಿಯನ್ನು ಈ ಕ್ಷೇತ್ರದಿಂದ ಗೆಲ್ಲಿಸಿಕೊಂಡು ಬರುವುದಾಗಿ ವಾಗ್ದಾನ ನೀಡಿದ್ದರು. ಕೊಪ್ಪಳ, ಬಾಗಲಕೋಟೆಯಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ಹೊತ್ತಿದ್ದರು. ಈ ಬಗ್ಗೆ ನಾಯಕರು ಚರ್ಚಿಸಿದರು.