ಮಂಡ್ಯ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಆತ್ಮಾನಂದ ಅವರ ಮನೆ ಮೇಲೆ ದಾಳಿ ನಡೆಸಿದರು.
ಎರಡು ಕಾರುಗಳಲ್ಲಿ ಬಂದ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದರು. ರಾತ್ರಿವರೆಗೂ ಶೋಧ ಕಾರ್ಯ ಮುಂದುವರೆದಿತ್ತು. ದಾಳಿ ವಿವರಗಳು ಲಭ್ಯವಾಗಿಲ್ಲ. ಇಲ್ಲಿಯವರೆಗೆ ಮಂಡ್ಯ–ಮೈಸೂರಿನಲ್ಲಿ ಐವರು ಮುಖಂಡರು, ಗುತ್ತಿಗೆದಾರರ ಮನೆಗಳ ಮೇಲೆ ದಾಳಿ ನಡೆದಿದೆ.