‘ಹಿಂದಿನ ಸರ್ಕಾರವು ₹158 ಕೋಟಿ ವೆಚ್ಚದಲ್ಲಿ ಜಾತಿಗಣತಿ ನಡೆಸುವ ಮೂಲಕ ಸಾಮಾಜಿಕ, ಶೈಕ್ಷಣಿಕ, ಉದ್ಯೋಗ, ಕೌಟುಂಬಿಕ ಆಸ್ತಿಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಿ ವರದಿ ಸಿದ್ಧಪಡಿಸಿತ್ತು. ಈ ವರದಿಯನ್ನು ಸ್ವೀಕರಿಸಿ, ರಾಜ್ಯದ ಜನರಿಗೆ ಸಾಮಾಜಿಕ ನ್ಯಾಯ ಒದಗಿಸಬೇಕಾಗಿತ್ತು. ಆದರೆ, ವರದಿಯನ್ನು ಸ್ವೀಕರಿಸದೇ ಸರ್ಕಾರ ಜನರಿಗೆ ಅನ್ಯಾಯ ಮಾಡಿದೆ’ ಎಂದು ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಪ್ರಕಟಣೆಯಲ್ಲಿ ಹೇಳಿದ್ದಾರೆ.