‘ಪ್ರವಾದಿ ಮುಹಮ್ಮದ್–ಮಾನವ ಕುಲದ ಶ್ರೇಷ್ಠ ಮಾರ್ಗದರ್ಶಕ’ ಎಂಬ ಹೆಸರಿನ ಈ ಅಭಿಯಾನವು ರಾಜ್ಯದ ಜಿಲ್ಲಾ, ತಾಲ್ಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿ ನಡೆಯಲಿದೆ. ಅಭಿಯಾನದಲ್ಲಿ ಸಮ್ಮೇಳನ, ವಿಚಾರಗೋಷ್ಠಿ, ವಸ್ತುಪ್ರದರ್ಶನ, ಸ್ವಚ್ಛತಾ ಅಭಿಯಾನ, ಸಸಿ ನೆಡುವುದು, ಸೌಹಾರ್ದಕ್ಕಾಗಿ ಮಾನವ ಸರಪಳಿ ರಚಿಸುವ ಕಾರ್ಯಕ್ರಮಗಳು ಇರಲಿವೆ’ ಎಂದು ಸಂಘಟನೆಯ ಅಧ್ಯಕ್ಷ ಮುಹಮ್ಮದ್ ಅತ್ಥರ್ವುಲ್ಲಾ ಶರೀಫ್ ಮಾಹಿತಿ ನೀಡಿದರು.