<p><strong>ಬೆಂಗಳೂರು:‘</strong>ಕೆ.ಸಿ. ವ್ಯಾಲಿ ಯೋಜನೆಯಲ್ಲಿ ಈಗ ದಿನಕ್ಕೆ 4 ಕೋಟಿ ಲೀಟರ್ ನೀರನ್ನು ಹೆಚ್ಚುವರಿಯಾಗಿ ಸರಬರಾಜು ಮಾಡಲಾಗುತ್ತದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.</p>.<p>‘ಈ ಹಿಂದೆ ದಿನಕ್ಕೆ 25 ಕೋಟಿ ಲೀಟರ್ ನೀರನ್ನು ಪಂಪ್ ಮಾಡಲಾಗುತ್ತಿತ್ತು. ಈಗ ಈ ಪ್ರಮಾಣವನ್ನು 29 ಕೋಟಿ ಲೀಟರ್ಗೆ ಹೆಚ್ಚಿಸಲಾಗಿದೆ. ಮುಂದಿನ 10 ದಿನಗಳಲ್ಲಿ ಈ ಹೆಚ್ಚುವರಿ ನೀರನ್ನು ಸರಬರಾಜು ಮಾಡಲಾಗುವುದು. ಜಲಮಂಡಳಿ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ನಿರಂತರವಾಗಿ ನಡೆಸಿದ ಚರ್ಚೆಯ ಫಲವಾಗಿ ಇದು ಸಾಧ್ಯವಾಗಿದೆ’ ಎಂದು ಸಚಿವರು ತಿಳಿಸಿದರು.</p>.<p>‘ಹೆಚ್ಚುವರಿಯಾಗಿ ಪಂಪ್ ಮಾಡುತ್ತಿರುವ ನೀರಿನಲ್ಲಿ 1 ಕೋಟಿ ಲೀಟರ್ ನೀರನ್ನು ಹೊಸಕೋಟೆ ವ್ಯಾಪ್ತಿಯ ಕೆರೆಗಳನ್ನು ತುಂಬಿಸಲಾಗುತ್ತದೆ. 2 ಕೋಟಿ ಲೀಟರ್ ನೀರನ್ನು ಮಾಲೂರಿನ ವ್ಯಾಪ್ತಿಯ ಕೆರೆಗಳನ್ನು ತುಂಬಿಸಲಾಗುತ್ತದೆ. ಈ ಎರಡೂ ಕೊಳವೆಮಾರ್ಗಗಳಿಗೆ ನೀರು ಸರಬರಾಜು ಆರಂಭವಾಗಿದ್ದು, ಮುಖ್ಯ ಸರಣಿಯಲ್ಲಿ (ನರಸಾಪುರ–ಎಸ್ ಅಗ್ರಹಾರ–ಜನಘಟ್ಟ–ಬಂಗಾರಪೇಟೆ) ಕೂಡ 1 ಕೋಟಿ ಲೀಟರ್ ಹೆಚ್ಚುವರಿ ನೀರು ಹರಿಸಲಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:‘</strong>ಕೆ.ಸಿ. ವ್ಯಾಲಿ ಯೋಜನೆಯಲ್ಲಿ ಈಗ ದಿನಕ್ಕೆ 4 ಕೋಟಿ ಲೀಟರ್ ನೀರನ್ನು ಹೆಚ್ಚುವರಿಯಾಗಿ ಸರಬರಾಜು ಮಾಡಲಾಗುತ್ತದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.</p>.<p>‘ಈ ಹಿಂದೆ ದಿನಕ್ಕೆ 25 ಕೋಟಿ ಲೀಟರ್ ನೀರನ್ನು ಪಂಪ್ ಮಾಡಲಾಗುತ್ತಿತ್ತು. ಈಗ ಈ ಪ್ರಮಾಣವನ್ನು 29 ಕೋಟಿ ಲೀಟರ್ಗೆ ಹೆಚ್ಚಿಸಲಾಗಿದೆ. ಮುಂದಿನ 10 ದಿನಗಳಲ್ಲಿ ಈ ಹೆಚ್ಚುವರಿ ನೀರನ್ನು ಸರಬರಾಜು ಮಾಡಲಾಗುವುದು. ಜಲಮಂಡಳಿ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ನಿರಂತರವಾಗಿ ನಡೆಸಿದ ಚರ್ಚೆಯ ಫಲವಾಗಿ ಇದು ಸಾಧ್ಯವಾಗಿದೆ’ ಎಂದು ಸಚಿವರು ತಿಳಿಸಿದರು.</p>.<p>‘ಹೆಚ್ಚುವರಿಯಾಗಿ ಪಂಪ್ ಮಾಡುತ್ತಿರುವ ನೀರಿನಲ್ಲಿ 1 ಕೋಟಿ ಲೀಟರ್ ನೀರನ್ನು ಹೊಸಕೋಟೆ ವ್ಯಾಪ್ತಿಯ ಕೆರೆಗಳನ್ನು ತುಂಬಿಸಲಾಗುತ್ತದೆ. 2 ಕೋಟಿ ಲೀಟರ್ ನೀರನ್ನು ಮಾಲೂರಿನ ವ್ಯಾಪ್ತಿಯ ಕೆರೆಗಳನ್ನು ತುಂಬಿಸಲಾಗುತ್ತದೆ. ಈ ಎರಡೂ ಕೊಳವೆಮಾರ್ಗಗಳಿಗೆ ನೀರು ಸರಬರಾಜು ಆರಂಭವಾಗಿದ್ದು, ಮುಖ್ಯ ಸರಣಿಯಲ್ಲಿ (ನರಸಾಪುರ–ಎಸ್ ಅಗ್ರಹಾರ–ಜನಘಟ್ಟ–ಬಂಗಾರಪೇಟೆ) ಕೂಡ 1 ಕೋಟಿ ಲೀಟರ್ ಹೆಚ್ಚುವರಿ ನೀರು ಹರಿಸಲಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>