ಕೆ.ಆರ್.ಪುರ: ಚುನಾವಣಾ ಆಯೋಗ, ಬಿಬಿಎಂಪಿ ಜತೆಗೆ ಕೆ.ಆರ್.ಪುರ ಸುತ್ತಮುತ್ತ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.
ಕೆ.ಆರ್.ಪುರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಿಂದ ಹೊರಟ ಜಾಗೃತಿ ಜಾಥಾ, ಹಳೆ ಮದ್ರಾಸ್ ರಸ್ತೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಸ್ತೆ ಮೂಲಕ ಬಿಬಿಎಂಪಿ ಕಚೇರಿಗೆ ತೆರಳಿತು.
ಜಯಕರ್ನಾಟಕ ಸಂಘಟನೆಯ ರಾಜ್ಯ ಘಟಕ ಅಧ್ಯಕ್ಷ ಚಂದ್ರಪ್ಪ, ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಜಗದೀಶ್ ಮತದಾನದ ಮಹತ್ವ ತಿಳಿಸಿದರು. ಉಪಾಧ್ಯಕ್ಷ ವಿನೋದ್ ಶೆಟ್ಟಿ, ಕೆ.ಆರ್.ಪುರ ಅಧ್ಯಕ್ಷ ಕಲ್ಕೆರೆ ಜಿ. ಮಾದೇಶಗೌಡ, ಪ್ರಧಾನ ಕಾರ್ಯದರ್ಶಿ ಪ್ರವೀಣ್, ಆಟೋ ಘಟಕದ ಅಧ್ಯಕ್ಷ ತಾಜುದ್ದೀನ್ ಇದ್ದರು.