<p><strong>ಕೆಂಗೇರಿ:</strong> ‘ಇಂದಿನ ಕಾಲದ ಮಕ್ಕಳಿಗೆ ಕಲಿಯಲು ಬೇಸಿಗೆ ಶಿಬಿರದ ವೇದಿಕೆಗಳಿವೆ. ನಮ್ಮ ಕಾಲದಲ್ಲಿ ಮರಕೋತಿ ಆಟದಲ್ಲೇ ಬೇಸಿಗೆ ಮುಗಿದು ಹೋಗುತ್ತಿತ್ತು’ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಕೆ.ಆರ್.ವೇಣುಗೋಪಾಲ್ ತಮ್ಮ ಬಾಲ್ಯ ದಿನಗಳನ್ನು ನೆನಪಿಸಿಕೊಂಡರು.</p>.<p>ವಿಶ್ವವಿದ್ಯಾಲಯದ ಪ್ರದರ್ಶನ ಕಲಾ ವಿಭಾಗದಲ್ಲಿ ಆಯೋಜಿಸಿದ್ದ ಮಕ್ಕಳ ರಂಗಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಿಬಿರದಲ್ಲಿ ನೂರಾರು ಮಕ್ಕಳು ಒಟ್ಟಾಗಿ ಬೆರೆತು ಕಲಿಯುವ ಅವಕಾಶ ದೊರೆಯುತ್ತದೆ. ಅಡಗಿರುವ ವಿಶಿಷ್ಟ ಪ್ರತಿಭೆಯನ್ನು ರಂಗದ ಮೇಲೆ ತೋರ್ಪಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಮಕ್ಕಳಲ್ಲಿ ಚಿಕ್ಕಂದಿನಲ್ಲಿಯೇ ಪ್ರಪಂಚವನ್ನು ಸಕಾರಾತ್ಮಕವಾಗಿ ಎದುರಿಸುವ ಶಕ್ತಿ ವೃದ್ಧಿಸುತ್ತದೆ’ ಎಂದು ಹೇಳಿದರು.</p>.<p>‘ಪಠ್ಯ ಹಾಗೂ ಪರೀಕ್ಷಾ ಒತ್ತಡದಿಂದ ವಿದ್ಯಾರ್ಥಿಗಳು ಹೊರಬರಲು ರಂಗ ಶಿಬಿರಗಳು ಸಹಕಾರಿಯಾಗಿವೆ. ಇಲ್ಲಿ ಅಂಕ ಗಳಿಕೆಯ ಗೋಜಿಲ್ಲ. ಅನುತ್ತೀರ್ಣವಾಗುವ ಭಯವೂ ಇಲ್ಲ’ ಎಂದು ಕುಲಸಚಿವ ಬಿ.ಕೆ.ರವಿ ಹೇಳಿದರು.</p>.<p>ಕಾರ್ಯಕ್ರಮದಲ್ಲಿ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ‘ಶಿಬಿರದಲ್ಲಿ ಜಾನಪದ, ನೃತ್ಯ, ಯೋಗ, ಹಾಡುಗಾರಿಕೆ, ಕುಸುರಿ ಕಲೆಗಳ ತರಬೇತಿ ನೀಡಲಾಗುತ್ತಿದೆ’ ಎಂದು ಪ್ರದರ್ಶನ ಕಲಾ ವಿಭಾಗದ ನಿರ್ದೇಶಕ ರಾಮಕೃಷ್ಣಯ್ಯ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ:</strong> ‘ಇಂದಿನ ಕಾಲದ ಮಕ್ಕಳಿಗೆ ಕಲಿಯಲು ಬೇಸಿಗೆ ಶಿಬಿರದ ವೇದಿಕೆಗಳಿವೆ. ನಮ್ಮ ಕಾಲದಲ್ಲಿ ಮರಕೋತಿ ಆಟದಲ್ಲೇ ಬೇಸಿಗೆ ಮುಗಿದು ಹೋಗುತ್ತಿತ್ತು’ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಕೆ.ಆರ್.ವೇಣುಗೋಪಾಲ್ ತಮ್ಮ ಬಾಲ್ಯ ದಿನಗಳನ್ನು ನೆನಪಿಸಿಕೊಂಡರು.</p>.<p>ವಿಶ್ವವಿದ್ಯಾಲಯದ ಪ್ರದರ್ಶನ ಕಲಾ ವಿಭಾಗದಲ್ಲಿ ಆಯೋಜಿಸಿದ್ದ ಮಕ್ಕಳ ರಂಗಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಿಬಿರದಲ್ಲಿ ನೂರಾರು ಮಕ್ಕಳು ಒಟ್ಟಾಗಿ ಬೆರೆತು ಕಲಿಯುವ ಅವಕಾಶ ದೊರೆಯುತ್ತದೆ. ಅಡಗಿರುವ ವಿಶಿಷ್ಟ ಪ್ರತಿಭೆಯನ್ನು ರಂಗದ ಮೇಲೆ ತೋರ್ಪಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಮಕ್ಕಳಲ್ಲಿ ಚಿಕ್ಕಂದಿನಲ್ಲಿಯೇ ಪ್ರಪಂಚವನ್ನು ಸಕಾರಾತ್ಮಕವಾಗಿ ಎದುರಿಸುವ ಶಕ್ತಿ ವೃದ್ಧಿಸುತ್ತದೆ’ ಎಂದು ಹೇಳಿದರು.</p>.<p>‘ಪಠ್ಯ ಹಾಗೂ ಪರೀಕ್ಷಾ ಒತ್ತಡದಿಂದ ವಿದ್ಯಾರ್ಥಿಗಳು ಹೊರಬರಲು ರಂಗ ಶಿಬಿರಗಳು ಸಹಕಾರಿಯಾಗಿವೆ. ಇಲ್ಲಿ ಅಂಕ ಗಳಿಕೆಯ ಗೋಜಿಲ್ಲ. ಅನುತ್ತೀರ್ಣವಾಗುವ ಭಯವೂ ಇಲ್ಲ’ ಎಂದು ಕುಲಸಚಿವ ಬಿ.ಕೆ.ರವಿ ಹೇಳಿದರು.</p>.<p>ಕಾರ್ಯಕ್ರಮದಲ್ಲಿ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ‘ಶಿಬಿರದಲ್ಲಿ ಜಾನಪದ, ನೃತ್ಯ, ಯೋಗ, ಹಾಡುಗಾರಿಕೆ, ಕುಸುರಿ ಕಲೆಗಳ ತರಬೇತಿ ನೀಡಲಾಗುತ್ತಿದೆ’ ಎಂದು ಪ್ರದರ್ಶನ ಕಲಾ ವಿಭಾಗದ ನಿರ್ದೇಶಕ ರಾಮಕೃಷ್ಣಯ್ಯ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>