ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಗೀತ– ಸೇವಾರತ್ನ ಪ್ರಶಸ್ತಿ ಪ್ರದಾನ

Last Updated 12 ನವೆಂಬರ್ 2018, 18:56 IST
ಅಕ್ಷರ ಗಾತ್ರ

ಬೆಂಗಳೂರು: ‘ಸಮಾಜದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸುವುದಕ್ಕಿಂತ ಸುತ್ತಿ ಸುಳಿದು ನೋಡದಂತೆ ಅಂಧನಾಗುವುದೇ ಲೇಸು’ ಎಂದು ಸಾಹಿತಿ ಕೆ. ಮರುಳಸಿದ್ಧಪ್ಪ ಅಭಿಪ್ರಾಯಪಟ್ಟರು.

ಗಾನಯೋಗಿ ಪುಟ್ಟರಾಜ ಗವಾಯಿ ಮತ್ತು ಹೆಲನ್‌ ಕೆಲ್ಲರ್‌ ಸ್ಮರಣಾರ್ಥ ಕದಂಬ ಅಂಗವಿಕಲರ ಸಾಂಸ್ಕೃತಿಕ ಕಲ್ಯಾಣ ಸಂಸ್ಥೆ ಹಾಗೂ ಅಂಧರ ವಿಮೋಚನಾ ವೇದಿಕೆ ಜಂಟಿಯಾಗಿ ಹಮ್ಮಿಕೊಂಡಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಅಸಮಾನತೆ ಮಾನವ ನಿರ್ಮಿತ ತಾರತಮ್ಯವಾದರೆ, ಅಂಗವೈಕಲ್ಯ ನಿಸರ್ಗ ನಿರ್ಮಿತ ತಾರತಮ್ಯ. ವಿಶೇಷ ಚೇತನರನ್ನು ಗೌರವದಿಂದ ಕಾಣುವುದು ನಾಗರಿಕ ಸಮಾಜದ ಕರ್ತವ್ಯ’ ಎಂದರು.

ಹಿರಿಯ ಸಂಗೀತ ಕಲಾವಿದೆ ಡಾ. ಶ್ಯಾಮಲಾ ಜಿ. ಭಾವೆ ಅವರಿಗೆ ‘ಸಂಗೀತರತ್ನ’ ಹಾಗೂ ನೇತ್ರತಜ್ಞ ಡಾ. ಕೆ. ಭುಜಂಗ ಶೆಟ್ಟಿ ಅವರಿಗೆ ‘ಸೇವಾರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಲಕ್ಷ್ಮಿನಾರಾಯಣ ನಾಗವಾರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT