ಕಂದಾಯ ಇಲಾಖೆಯು ಜತೆಗೆ ಜಲಮಂಡಳಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಯುನೈಟೆಡ್ ಬೆಂಗಳೂರು ಸಂಸ್ಥೆಯ ಪ್ರತಿನಿಧಿಗಳು ಬುಧವಾರ ಕೆರೆ ಪ್ರದೇಶಕ್ಕೆ ಭೇಟಿ ನೀಡಿ, ಸಮೀಕ್ಷೆ ಮಾಡಿದ್ದಾರೆ. ವಾರಾಂತ್ಯದ ವೇಳೆ ಸಮೀಕ್ಷೆ ಮುಕ್ತಾಯವಾಗಲಿದ್ದು, ತಜ್ಞರ ಸಮಿತಿಯು ವರದಿಯನ್ನು ಮೇ 28ರೊಳಗೆ ಲೋಕಾಯುಕ್ತರಿಗೆ ಸಲ್ಲಿಸಲಿದೆ.