ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡದ ಕಾಳಜಿಗೆ ಸಲಹೆ

Last Updated 3 ಡಿಸೆಂಬರ್ 2018, 19:36 IST
ಅಕ್ಷರ ಗಾತ್ರ

ಬೆಂಗಳೂರು: ಕೆ.ಆರ್.ಪುರ ಸಮೀಪದ ಐಟಿಐ ಬಳಿಯ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಯಲ್ಲಿ ಮನೋರಂಜನಾ‌ ಸಂಘದಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಶಿಕ್ಷಕ ಡಾ.ಎಂ.ಶಿವಕುಮಾರ್ ಉದ್ಘಾಟಿಸಿದರು.

‘ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಯಲ್ಲಿ ಕನ್ನಡಿಗರು ಕೂಡ ಕನ್ನಡದ ಕೆಲಸ ಮಾಡುತ್ತಿರುವುದು ಖುಷಿ ಕೊಡುವ ವಿಚಾರ. ನಗರದಲ್ಲಿ ಹಲವು ಭಾಷಿಕರಿದ್ದು‌ ಅವರೆಲ್ಲರೂ ಕನ್ನಡದ ಬಗ್ಗೆ ವಿಶೇಷ ಕಾಳಜಿ ಹೊಂದಬೇಕು. ಬಹುರಾಷ್ಟ್ರೀಯ ಕಂಪನಿಗಳು ಕನ್ನಡದ ಒಲವು ಹೊಂದಬೇಕು’ ಎಂದರು.

‘ಬಹುಶಃ ತಮಿಳುನಾಡನ್ನು ಬಿಟ್ಟರೆ ಕರ್ನಾಟಕದಲ್ಲಿ ದೊರೆಯುವಷ್ಟು ಶಾಸನಗಳು ಭಾರತದ ಯಾವ ಪ್ರಾಂತದಲ್ಲಿಯೂ ಸಿಗುವುದಿಲ್ಲ. ಸುಮಾರು 20 ಸಾವಿರಕ್ಕೂ ಹೆಚ್ಚು ಶಾಸನಗಳು ಕರ್ನಾಟಕದಲ್ಲಿ ಈವರೆಗೆ ದೊರಕಿವೆ’ ಎಂದರು.

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಲಾಯಿತು. 2017-18 ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ವಿಜೇತ ಹಾಗೂ ಅಂತರರಾಷ್ಟ್ರೀಯ ಕ್ರೀಡಾಪಟು ಡಾ.ಜಿ.ರಮೇಶಪ್ಪ ಅವರನ್ನು ಸನ್ಮಾನಿಸಲಾಯಿತು. ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ರಾಮನ್ ಧನಶೇಖರ್, ನೌಕರರ ಸಂಘದ ಕಾರ್ಯದರ್ಶಿ ಎಂ.ನಾಗರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT