ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಶೆಟ್ಟಿ ಮಾತನಾಡಿ, ‘ಐಟಿಸಿ ಕಂಪನಿಯಲ್ಲಿ 7 ಸಾವಿರ ಹುದ್ದೆಗಳಲ್ಲಿ 800 ಹುದ್ದೆಗಳು ಮಾತ್ರ ಕನ್ನಡಿಗರಿಗೆ ದೊರಕಿವೆ. ಕನ್ನಡ ರಾಜ್ಯೋತ್ಸವ ಆಚರಣೆ ಮಾಡಿದ್ದಕ್ಕಾಗಿ ಕನ್ನಡಿಗ ನವೀನ್ ಅವರನ್ನು ಕೆಲಸದಿಂದ ಕಿತ್ತು ಹೊಟ್ಟೆ ಮೇಲೆ ಹೊಡೆಯುವಂತಹ ಕೆಲಸ ಮಾಡಿದೆ. ಕರ್ನಾಟಕದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಬಾರದೇ’ ಎಂದು ಪ್ರಶ್ನಿಸಿದರು. ‘ಖಾಸಗಿ ಕಂಪನಿಗಳಲ್ಲಿ ಹಿರಿಯ ಅಧಿಕಾರಿಗಳು ಕನ್ನಡಿಗರಿಗೆ ನಿರಂತರವಾಗಿ ತೊಂದರೆ ಕೊಡುತ್ತ ಬಂದಿದ್ದಾರೆ. ಇದರ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.