ಬೆಂಗಳೂರು: ನ್ಯಾಷನಲ್ ಕಾಲೇಜು ಮೆಟ್ರೊ ನಿಲ್ದಾಣದ ಸಮೀಪದಲ್ಲಿ ಕನ್ನಡ ಭವನ ನಿರ್ಮಿಸುವುದಕ್ಕೆ ಅಡ್ಡಗಾಲು ಹಾಕುತ್ತಿರುವುದನ್ನು ಖಂಡಿಸಿ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕರ್ತರು ಭಾನುವಾರ ಧರಣಿ ಆರಂಭಿಸಿದರು.
ಸಾಹಿತಿ ಚಂದ್ರಶೇಖರ ಪಾಟೀಲ, ‘ಪ್ರತಿಯೊಂದಕ್ಕೂ ಹೋರಾಟ ಮಾಡುವ ಸ್ಥಿತಿ ಇರುವುದು ಕರ್ನಾಟಕದಲ್ಲಿ ಮಾತ್ರ. ಈ ವಿಚಾರದಲ್ಲೂ ಹೋರಾಟ ಅನಿವಾರ್ಯ’ ಎಂದರು.
‘ಯಾರೇ ಅಡ್ಡಗಾಲು ಹಾಕಿದರೂ ಕನ್ನಡ ಭವನ ನಿರ್ಮಿಸಿಯೇ ತೀರುತ್ತೇವೆ’ ಎಂದು ಪರಿಷತ್ ಅಧ್ಯಕ್ಷ ಮಾಯಣ್ಣ ಹೇಳಿದರು.