ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಘೋಷಣೆ ಕೂಗಿದ ಯುವಕರು, ‘ಪಾಕಿಸ್ತಾನದ ಕರಾಚಿ ಹೆಸರಿನಲ್ಲಿ ಇಂದಿರಾನಗರದಲ್ಲಿ ವ್ಯಾಪಾರ ಮಾಡುವುದು ಬೇಡ. ಕೂಡಲೇ ‘ಕರಾಚಿ’ ಹೆಸರು ತೆಗೆದು ಹಾಕಿ. ಇಲ್ಲದಿದ್ದರೆ ಗಂಭೀರ ಸ್ವರೂಪದ ಹೋರಾಟ ನಡೆಸಲಾಗುವುದು’ಎಂದರು. ಬೇಕರಿ ಸಿಬ್ಬಂದಿ ಹಾಗೂ ಯುವಕರ ನಡುವೆ ಮಾತಿನ ಚಕಮಕಿ ನಡೆಯಿತು. ಸ್ಥಳಕ್ಕೆ ಬಂದ ಬೇಕರಿ ಮಾಲೀಕ, ‘1953ರಿಂದ ಈ ಬೇಕರಿ ನಡೆಸುತ್ತಿದ್ದೇವೆ. ನೀವೆಲ್ಲರೂ ದಿಢೀರ್ ಬಂದು ಹೆಸರು ಕಿತ್ತುಹಾಕುವಂತೆ ಪ್ರತಿಭಟನೆ ಮಾಡಿದರೆ ಹೇಗೆ’ ಎಂದು ಪ್ರಶ್ನಿಸಿದರು.