ಹೂವಿನ ಕರಗದ ದಿನ ಕಬ್ಬನ್ ಪಾರ್ಕ್ನ ಕರಗದ ಕುಂಟೆಯಲ್ಲಿ ಬೆಳಿಗ್ಗೆ ಗಂಗಾಪೂಜೆ ಮಾಡಿ ಅಲ್ಲಿಂದ ಹಸಿಕರಗವನ್ನು ಮಂಟಪಕ್ಕೆ ಕರೆತರಲಾಗುತ್ತದೆ. ರಾತ್ರಿ 12.30ಕ್ಕೆ ಧರ್ಮರಾಯಸ್ವಾಮಿ ದೇವಾಲಯದಿಂದಹೊರಡುವ ಉತ್ಸವ ಹಲಸೂರು ಪೇಟೆಯ ದೇವಾಲಯಗಳಲ್ಲಿ ಪೂಜೆ ಸ್ವೀಕರಿಸಿ, ನಗರ್ತಪೇಟೆ ಮಾರ್ಗವಾಗಿ ಕಬ್ಬನ್ ಪೇಟೆ, ಗಾಣಿಗರ ಪೇಟೆ, ಅವೆನ್ಯೂ ರಸ್ತೆ, ದೊಡ್ಡಪೇಟೆ, ಕೆ.ಆರ್. ಮಾರುಕಟ್ಟೆ, ಆಕ್ಕಿಪೇಟೆ, ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಕಬ್ಬನ್ಪೇಟೆ, ಸುಣ್ಣಕಲ್ ಪೇಟೆಗಳಲ್ಲಿ ಸಂಚರಿಸಲಿದೆ.