ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಗದಲ್ಲಿ ಕಿತ್ತಾಟ; ವಿಡಿಯೊ ವೈರಲ್

Last Updated 20 ಏಪ್ರಿಲ್ 2019, 19:49 IST
ಅಕ್ಷರ ಗಾತ್ರ

ಬೆಂಗಳೂರು: ಹಲಸೂರು ಗೇಟ್ ಸಮೀಪದ ಧರ್ಮರಾಯ ದೇವಸ್ಥಾನದ ಬಳಿ ಶುಕ್ರವಾರ ರಾತ್ರಿ ಕರಗ ಆಚರಣೆ ವೇಳೆ ಇಬ್ಬರು ಪಾನಮತ್ತ ಯುವಕರು ಪೊಲೀಸರ ಎದುರೇ ಬಡಿದಾಡಿಕೊಂಡಿದ್ದಾರೆ.

ರಾತ್ರಿ 12.30ರ ಸುಮಾರಿಗೆ ಯುವಕರು ಏಕಾಏಕಿ ಒಬ್ಬರಿಗೊಬ್ಬರು ಹೊಡೆದುಕೊಳ್ಳುತ್ತ ಜನರ ಮೇಲೆ ಬಿದ್ದಿದ್ದಾರೆ. ಜಗಳ ಬಿಡಿಸಲು ಬಂದ ಪೊಲೀಸರನ್ನೇ ತಳ್ಳಿ ಗಲಾಟೆ ಮಾಡಿಕೊಂಡಿದ್ದಾರೆ. ಈ ದೃಶ್ಯವನ್ನು ಸಾರ್ವಜನಿಕರು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದು, ವಿಡಿಯೊ ಜಾಲತಾಣಗಳಲ್ಲಿ ಹರಿದಾಡುತ್ತಿದ್ದೆ.

ಹುಡುಗಿಯನ್ನು ಚುಡಾಯಿಸಿದ ವಿಚಾರಕ್ಕೆ ಗಲಾಟೆ ಶುರುವಾಯಿತು ಎನ್ನಲಾಗಿದೆ. ಆದರೆ, ‘ಕ್ಷುಲ್ಲಕ ಕಾರಣಕ್ಕೆ ಯುವಕರು ಕಿತ್ತಾಡಿಕೊಂಡಿದ್ದರು. ಇಬ್ಬರನ್ನೂ ವಶಕ್ಕೆ ಪಡೆದು, ಬುದ್ಧಿ ಹೇಳಿ ಬಿಟ್ಟು ಕಳುಹಿಸಿದೆವು’ ಎಂದು ಹಲಸೂರು ಗೇಟ್ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT