<p><strong>ಬೆಂಗಳೂರು:</strong> ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯಗಳನ್ನು ತಂದು ಕ್ವಾರಿಗಳಲ್ಲಿ ಸುರಿಯುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ದೊಡ್ಡಬಳ್ಳಾಪುರ, ಆನೇಕಲ್ಲು ಕ್ಷೇತ್ರಗಳ ಜನರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ’ ಎಂದು ಕಂದಾಯ<br />ಸಚಿವ ಆರ್. ಅಶೋಕ ಭರವಸೆ ನೀಡಿದರು.</p>.<p>ವಿಧಾನಸಭೆಯಲ್ಲಿ ಮಂಗಳವಾರ ಶೂನ್ಯವೇಳೆಯಲ್ಲಿ ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಯ್ಯ ಮತ್ತು ಆನೇಕಲ್ ಶಾಸಕ ಶಿವಣ್ಣ ಈ ವಿಷಯ ಪ್ರಸ್ತಾಪಿಸಿ, ‘ದೊಡ್ಡಬಳ್ಳಾಪುರ, ಆನೆಕಲ್ಲು ಕ್ಷೇತ್ರಗಳಲ್ಲಿ ಘನತ್ಯಾಜ್ಯ ಸಂಗ್ರಹಣೆಯ ಕ್ವಾರಿಗಳು ಹಾಗೂ ಟೆರ್ರಾಫಾರ್ಮ್ ಗಳಿಂದ ನಿವಾಸಿಗಳಿಗೆ ಭಾರಿ ತೊಂದರೆಯಾಗುತ್ತಿದೆ. ಇದನ್ನು ವಿರೋಧಿಸಿ ನಿವಾಸಿಗಳೂ ಘನತ್ಯಾಜ್ಯ ಹೋರಾಟ ಸಮಿತಿ ರಚಿಸಿ<br />ಪ್ರತಿಭಟನೆ ನಡೆಸುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿ, ತ್ಯಾಜ್ಯ ಸಂಸ್ಕರಣಾ ಘಟಕ ಅವೈಜ್ಞಾನಿಕವಾಗಿದೆ ಎಂದು ವರದಿ ನೀಡಿದ್ದಾರೆ. ಆದರೆ, ಸರ್ಕಾರ ಅದನ್ನು ತಡೆಯಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಜನರಿಗೆ ನಾವು<br />ಉತ್ತರಿಸಬೇಕಾಗುತ್ತದೆ’ ಎಂದು ತಿಳಿಸಿದರು.</p>.<p>ಆಗ ಕೃಷ್ಣಬೈರೇಗೌಡ, ‘ಸಚಿವರು ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಕಾರರೊಂದಿಗೆ ಮಾತುಕತೆ ನಡೆಸುವುದು ಉತ್ತಮ’ ಎಂದು ಸಲಹೆ ನೀಡಿದರು.</p>.<p>ಅಶೋಕ ಉತ್ತರಿಸಿ, ‘ಕಸದ ಸಮಸ್ಯೆ ನಮ್ಮ ಸರ್ಕಾರದ ಅವಧಿಯಲ್ಲಿ ಆರಂಭವಾಗಿದ್ದಲ್ಲ. ಇದು ಹಲವು ವರ್ಷಗಳಿಂದ ಇರುವ ಸಮಸ್ಯೆ. ಅದರ ನಿವಾರಣೆಗೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಸಂಬಂಧಿಸಿದ ಶಾಸಕರೊಂದಿಗೆ ಚರ್ಚಿಸಿ, ಪ್ರತಿಭಟನಕಾರರ ಮನವೊಲಿಸುತ್ತೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯಗಳನ್ನು ತಂದು ಕ್ವಾರಿಗಳಲ್ಲಿ ಸುರಿಯುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ದೊಡ್ಡಬಳ್ಳಾಪುರ, ಆನೇಕಲ್ಲು ಕ್ಷೇತ್ರಗಳ ಜನರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ’ ಎಂದು ಕಂದಾಯ<br />ಸಚಿವ ಆರ್. ಅಶೋಕ ಭರವಸೆ ನೀಡಿದರು.</p>.<p>ವಿಧಾನಸಭೆಯಲ್ಲಿ ಮಂಗಳವಾರ ಶೂನ್ಯವೇಳೆಯಲ್ಲಿ ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಯ್ಯ ಮತ್ತು ಆನೇಕಲ್ ಶಾಸಕ ಶಿವಣ್ಣ ಈ ವಿಷಯ ಪ್ರಸ್ತಾಪಿಸಿ, ‘ದೊಡ್ಡಬಳ್ಳಾಪುರ, ಆನೆಕಲ್ಲು ಕ್ಷೇತ್ರಗಳಲ್ಲಿ ಘನತ್ಯಾಜ್ಯ ಸಂಗ್ರಹಣೆಯ ಕ್ವಾರಿಗಳು ಹಾಗೂ ಟೆರ್ರಾಫಾರ್ಮ್ ಗಳಿಂದ ನಿವಾಸಿಗಳಿಗೆ ಭಾರಿ ತೊಂದರೆಯಾಗುತ್ತಿದೆ. ಇದನ್ನು ವಿರೋಧಿಸಿ ನಿವಾಸಿಗಳೂ ಘನತ್ಯಾಜ್ಯ ಹೋರಾಟ ಸಮಿತಿ ರಚಿಸಿ<br />ಪ್ರತಿಭಟನೆ ನಡೆಸುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿ, ತ್ಯಾಜ್ಯ ಸಂಸ್ಕರಣಾ ಘಟಕ ಅವೈಜ್ಞಾನಿಕವಾಗಿದೆ ಎಂದು ವರದಿ ನೀಡಿದ್ದಾರೆ. ಆದರೆ, ಸರ್ಕಾರ ಅದನ್ನು ತಡೆಯಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಜನರಿಗೆ ನಾವು<br />ಉತ್ತರಿಸಬೇಕಾಗುತ್ತದೆ’ ಎಂದು ತಿಳಿಸಿದರು.</p>.<p>ಆಗ ಕೃಷ್ಣಬೈರೇಗೌಡ, ‘ಸಚಿವರು ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಕಾರರೊಂದಿಗೆ ಮಾತುಕತೆ ನಡೆಸುವುದು ಉತ್ತಮ’ ಎಂದು ಸಲಹೆ ನೀಡಿದರು.</p>.<p>ಅಶೋಕ ಉತ್ತರಿಸಿ, ‘ಕಸದ ಸಮಸ್ಯೆ ನಮ್ಮ ಸರ್ಕಾರದ ಅವಧಿಯಲ್ಲಿ ಆರಂಭವಾಗಿದ್ದಲ್ಲ. ಇದು ಹಲವು ವರ್ಷಗಳಿಂದ ಇರುವ ಸಮಸ್ಯೆ. ಅದರ ನಿವಾರಣೆಗೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಸಂಬಂಧಿಸಿದ ಶಾಸಕರೊಂದಿಗೆ ಚರ್ಚಿಸಿ, ಪ್ರತಿಭಟನಕಾರರ ಮನವೊಲಿಸುತ್ತೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>