ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರ: ಸಾವಲ್ಲೂ ತಾಯಿಯ ಹಿಂಬಾಲಿಸಿದ ಮಗ

Last Updated 20 ಫೆಬ್ರುವರಿ 2019, 19:00 IST
ಅಕ್ಷರ ಗಾತ್ರ

ಕಾರವಾರ:ತಾಯಿಯ ಚಿತೆಗೆ ಬೆಂಕಿ ಇಟ್ಟ ಬಳಿಕ ಮಗನೂ ಮೃತಪಟ್ಟ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ ಸಿದ್ದರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.ಮಂಜುನಾಥ ಆತ್ಮರಾಮ ಕೊಳಂಬಕರ್ (49) ಮೃತಪಟ್ಟ ವ್ಯಕ್ತಿ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರ ತಾಯಿ ಸಾವಿತ್ರಿ ಕೊಳಂಬಕರ್ (70), ಮಂಗಳವಾರ ಮುಂಜಾನೆ ಮೃತಪಟ್ಟಿದ್ದರು. ಅವರ ಒಬ್ಬನೇ ಮಗ ಮಂಜುನಾಥ, ಎಲ್ಲ ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸಿದ್ದರು. ಸ್ಮಶಾನದಲ್ಲಿ ಚಿತೆಗೆ ಬೆಂಕಿ ಇಡುತ್ತಿದ್ದಂತೆಯೇ ಅವರಿಗೂ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಸಿದ್ದರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಯಿತು. ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬರುವಷ್ಟರಲ್ಲಿ ಮೃತಪಟ್ಟಿದ್ದರು.

ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT