ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರಿ ವಕೀಲರು, ‘ರಾಜ್ಯ ಸರ್ಕಾರ 2018ರ ಸೆಪ್ಟೆಂಬರ್ನಲ್ಲೇ ಮೂವರು ನ್ಯಾಯಾಂಗ ಸದಸ್ಯರ ಹೆಸರನ್ನು ಶಿಫಾರಸು ಮಾಡಿ ಕೇಂದ್ರಕ್ಕೆ ಕಳುಹಿಸಿಕೊಟ್ಟಿದೆ. ಆದರೆ, ಈ ಸಂಬಂಧ ಕ್ರಮ ಕೈಗೊಂಡ ಬಗ್ಗೆ ಇನ್ನೂ ಯಾವುದೇ ಮಾಹಿತಿ ತಲುಪಿಲ್ಲ. ಆದ್ದರಿಂದ, ಹೆಚ್ಚಿನ ವಿವರ ಪಡೆಯಲು ಕಾಲಾವಕಾಶ ಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಇದೇ 11ಕ್ಕೆ ಮುಂದೂಡಿದೆ.