ಇದಕ್ಕೆ ತೀವ್ರ ಅಸಮಾದಾನ ವ್ಯಕ್ತಪಡಿಸಿದ ಗ್ರಾಹಕರು, ಅಧಿಕಾರಿಗಳ ಬೇಜವಾಬ್ದಾರಿ ಹಾಗೂ ಕಂಪನಿಯ ಅವೈಜ್ಞಾನಿಕ ನಡೆಯಿಂದ ಕಂದಾಯ ಕೊರತೆ ಉಂಟಾಗಿದೆ. ಪ್ರಸಕ್ತ ಸಾಲಿನಲ್ಲಿ ₹ 5,830.59 ಕೋಟಿ ಆದಾಯ ಕಂಪನಿಗೆ ಬರಬೇಕಿತ್ತು. ಆದರೆ, ₹ 5,213.58 ಕೋಟಿ ಮಾತ್ರ ವಸೂಲಾಗಿದೆ. ಬಾಕಿ ಇರುವ ಎಲ್ಲ ಬಿಲ್ಗಳನ್ನೂ ಪೂರ್ಣಪ್ರಮಾಣದಲ್ಲಿ ವಸೂಲಿ ಮಾಡಬೇಕಾದುದು ಅಧಿಕಾರಿಗಳ ಕರ್ತವ್ಯ. ಅದನ್ನು ಬಿಟ್ಟು, ಕೊರತೆ ಸರಿದೂಗಿಸಲು ಹೊರೆಯನ್ನು ಗ್ರಾಹಕರ ಮೇಲೆ ಹೇರುವುದು ಯಾವ ನ್ಯಾಯ? ಎಂದೂ ಆಕ್ರೋಶ ವ್ಯಕ್ತಪಡಿಸಿದರು.