<p><strong>ಬೆಂಗಳೂರು: </strong>ರಾಜ್ಯ ಸರ್ಕಾರಿ ನೌಕರರ ಸಮನಾಗಿ ವೇತನ (ಆರನೇ ವೇತನ ಆಯೋಗದ ಶಿಫಾರಸಿನಂತೆ) ನೀಡಬೇಕು ಎಂಬ ವಿಚಾರವಾಗಿ ರಾಜ್ಯ ಒಕ್ಕಲಿಗರ ಸಂಘದ ನೌಕರರ ಒಕ್ಕೂಟದ ಸದಸ್ಯರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಗುರುವಾರ ಭೇಟಿ ಮಾಡಿ, ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರು.</p>.<p>ನೌಕರರ ಒಕ್ಕೂಟದ ಮನವಿ ಆಲಿಸಿದ ಮುಖ್ಯಮಂತ್ರಿಗಳು, ‘ರಾಜ್ಯ ಒಕ್ಕಲಿಗರ ಸಂಘದ ಆಡಳಿತಾಧಿಕಾರಿ ಜತೆಗೆ<br />ಮಾತುಕತೆ ನಡೆಸಿ, ಆರನೇ ವೇತನ ಶ್ರೇಣಿ ಬಿಡುಗಡೆ ವಿಚಾರವಾಗಿ ನಿರ್ದೇಶನ ನೀಡಲಾಗುವುದು’ ಎಂದು ಭರವಸೆ ನೀಡಿದ್ದಾರೆ.</p>.<p>ಸಾವಿರಕ್ಕೂ ಅಧಿಕ ನೌಕರರು ಕೆಲಸ ಬಹಿಷ್ಕರಿಸಿ, ಪ್ರತಿಭಟನೆ ಮುಂದುವರಿಸಿದರು. ಸೇವೆಗೆ ಹಾಜರಾಗುವಂತೆ ಪ್ರತಿಭಟನಾಕಾರರಿಗೆ ಸಂಘದ ಕಾರ್ಯನಿರ್ವಹಣಾ ಅಧಿಕಾರಿ ಸೂಚಿಸಿದ್ದು, ವೇತನ ಕಡಿತ ಮಾಡುವುವಾಗಿ ಎಚ್ಚರಿಕೆ ನೀಡಿದ್ದಾರೆ.</p>.<p>‘ಸಂಘವು ನಷ್ಟದಲ್ಲಿದೆ ಎಂಬ ಕಾರಣಕ್ಕೆ 2018ರ ಏಪ್ರಿಲ್ನಿಂದ ಜಾರಿಗೆ ಬರಬೇಕಾದ 6ನೇ ವೇತನ ಶ್ರೇಣಿಯನ್ನು 2019ರ ಏಪ್ರಿಲ್ನಿಂದ ಜಾರಿಗೊಳಿಸುವಂತೆ ಬೇಡಿಕೆ ಇಟ್ಟಿದ್ದೇವೆ. ಆದರೆ, 2020ರ ಜನವರಿಯಿಂದ ಜಾರಿಗೊಳಿಸುವುದಾಗಿ ಆಡಳಿತಾಧಿಕಾರಿ ಹೇಳುತ್ತಿದ್ದಾರೆ. 6ನೇ ವೇತನ ಶ್ರೇಣಿ ಜಾರಿಯಾಗದಿದ್ದಲ್ಲಿ ಎಚ್.ಡಿ. ದೇವೇಗೌಡರ ನಿವಾಸದ ವರೆಗೆ ಪ್ರತಿಭಟನೆ ನಡೆಸಲಾಗುವುದು ’ ಎಂದು ಒಕ್ಕೂಟದ ಕಾರ್ಯದರ್ಶಿ ಆರ್. ರಂಗರಾಜು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯ ಸರ್ಕಾರಿ ನೌಕರರ ಸಮನಾಗಿ ವೇತನ (ಆರನೇ ವೇತನ ಆಯೋಗದ ಶಿಫಾರಸಿನಂತೆ) ನೀಡಬೇಕು ಎಂಬ ವಿಚಾರವಾಗಿ ರಾಜ್ಯ ಒಕ್ಕಲಿಗರ ಸಂಘದ ನೌಕರರ ಒಕ್ಕೂಟದ ಸದಸ್ಯರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಗುರುವಾರ ಭೇಟಿ ಮಾಡಿ, ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರು.</p>.<p>ನೌಕರರ ಒಕ್ಕೂಟದ ಮನವಿ ಆಲಿಸಿದ ಮುಖ್ಯಮಂತ್ರಿಗಳು, ‘ರಾಜ್ಯ ಒಕ್ಕಲಿಗರ ಸಂಘದ ಆಡಳಿತಾಧಿಕಾರಿ ಜತೆಗೆ<br />ಮಾತುಕತೆ ನಡೆಸಿ, ಆರನೇ ವೇತನ ಶ್ರೇಣಿ ಬಿಡುಗಡೆ ವಿಚಾರವಾಗಿ ನಿರ್ದೇಶನ ನೀಡಲಾಗುವುದು’ ಎಂದು ಭರವಸೆ ನೀಡಿದ್ದಾರೆ.</p>.<p>ಸಾವಿರಕ್ಕೂ ಅಧಿಕ ನೌಕರರು ಕೆಲಸ ಬಹಿಷ್ಕರಿಸಿ, ಪ್ರತಿಭಟನೆ ಮುಂದುವರಿಸಿದರು. ಸೇವೆಗೆ ಹಾಜರಾಗುವಂತೆ ಪ್ರತಿಭಟನಾಕಾರರಿಗೆ ಸಂಘದ ಕಾರ್ಯನಿರ್ವಹಣಾ ಅಧಿಕಾರಿ ಸೂಚಿಸಿದ್ದು, ವೇತನ ಕಡಿತ ಮಾಡುವುವಾಗಿ ಎಚ್ಚರಿಕೆ ನೀಡಿದ್ದಾರೆ.</p>.<p>‘ಸಂಘವು ನಷ್ಟದಲ್ಲಿದೆ ಎಂಬ ಕಾರಣಕ್ಕೆ 2018ರ ಏಪ್ರಿಲ್ನಿಂದ ಜಾರಿಗೆ ಬರಬೇಕಾದ 6ನೇ ವೇತನ ಶ್ರೇಣಿಯನ್ನು 2019ರ ಏಪ್ರಿಲ್ನಿಂದ ಜಾರಿಗೊಳಿಸುವಂತೆ ಬೇಡಿಕೆ ಇಟ್ಟಿದ್ದೇವೆ. ಆದರೆ, 2020ರ ಜನವರಿಯಿಂದ ಜಾರಿಗೊಳಿಸುವುದಾಗಿ ಆಡಳಿತಾಧಿಕಾರಿ ಹೇಳುತ್ತಿದ್ದಾರೆ. 6ನೇ ವೇತನ ಶ್ರೇಣಿ ಜಾರಿಯಾಗದಿದ್ದಲ್ಲಿ ಎಚ್.ಡಿ. ದೇವೇಗೌಡರ ನಿವಾಸದ ವರೆಗೆ ಪ್ರತಿಭಟನೆ ನಡೆಸಲಾಗುವುದು ’ ಎಂದು ಒಕ್ಕೂಟದ ಕಾರ್ಯದರ್ಶಿ ಆರ್. ರಂಗರಾಜು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>