ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಭೇಟಿ ಮಾಡಿದ ಕಿಮ್ಸ್‌ ನೌಕರರು

6ನೇ ವೇತನ ಆಯೋಗದ ಶಿಫಾರಸಿನಂತೆ ನೀಡಿ
Last Updated 17 ಮೇ 2019, 19:49 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಮನಾಗಿ ವೇತನ (ಆರನೇ ವೇತನ ಆಯೋಗದ ಶಿಫಾರಸಿನಂತೆ) ನೀಡಬೇಕು ಎಂಬ ವಿಚಾರವಾಗಿ ರಾಜ್ಯ ಒಕ್ಕಲಿಗರ ಸಂಘದ ನೌಕರರ ಒಕ್ಕೂಟದ ಸದಸ್ಯರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಗುರುವಾರ ಭೇಟಿ ಮಾಡಿ, ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರು.

ನೌಕರರ ಒಕ್ಕೂಟದ ಮನವಿ ಆಲಿಸಿದ ಮುಖ್ಯಮಂತ್ರಿಗಳು, ‘ರಾಜ್ಯ ಒಕ್ಕಲಿಗರ ಸಂಘದ ಆಡಳಿತಾಧಿಕಾರಿ ಜತೆಗೆ
ಮಾತುಕತೆ ನಡೆಸಿ, ಆರನೇ ವೇತನ ಶ್ರೇಣಿ ಬಿಡುಗಡೆ ವಿಚಾರವಾಗಿ ನಿರ್ದೇಶನ ನೀಡಲಾಗುವುದು’ ಎಂದು ಭರವಸೆ ನೀಡಿದ್ದಾರೆ.

ಸಾವಿರಕ್ಕೂ ಅಧಿಕ ನೌಕರರು ಕೆಲಸ ಬಹಿಷ್ಕರಿಸಿ, ಪ್ರತಿಭಟನೆ ಮುಂದುವರಿಸಿದರು. ಸೇವೆಗೆ ಹಾಜರಾಗುವಂತೆ ಪ್ರತಿಭಟನಾಕಾರರಿಗೆ ಸಂಘದ ಕಾರ್ಯನಿರ್ವಹಣಾ ಅಧಿಕಾರಿ ಸೂಚಿಸಿದ್ದು, ವೇತನ ಕಡಿತ ಮಾಡುವುವಾಗಿ ಎಚ್ಚರಿಕೆ ನೀಡಿದ್ದಾರೆ.

‘ಸಂಘವು ನಷ್ಟದಲ್ಲಿದೆ ಎಂಬ ಕಾರಣಕ್ಕೆ 2018ರ ಏಪ್ರಿಲ್‍ನಿಂದ ಜಾರಿಗೆ ಬರಬೇಕಾದ 6ನೇ ವೇತನ ಶ್ರೇಣಿಯನ್ನು 2019ರ ಏಪ್ರಿಲ್‍ನಿಂದ ಜಾರಿಗೊಳಿಸುವಂತೆ ಬೇಡಿಕೆ ಇಟ್ಟಿದ್ದೇವೆ. ಆದರೆ, 2020ರ ಜನವರಿಯಿಂದ ಜಾರಿಗೊಳಿಸುವುದಾಗಿ ಆಡಳಿತಾಧಿಕಾರಿ ಹೇಳುತ್ತಿದ್ದಾರೆ. 6ನೇ ವೇತನ ಶ್ರೇಣಿ ಜಾರಿಯಾಗದಿದ್ದಲ್ಲಿ ಎಚ್.ಡಿ. ದೇವೇಗೌಡರ ನಿವಾಸದ ವರೆಗೆ ಪ್ರತಿಭಟನೆ ನಡೆಸಲಾಗುವುದು ’ ಎಂದು ಒಕ್ಕೂಟದ ಕಾರ್ಯದರ್ಶಿ ಆರ್. ರಂಗರಾಜು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT