ಸಂಘದ ಉಪ ಪ್ರಧಾನ ಕಾರ್ಯದರ್ಶಿ ವಿ. ನಾಗರಾಜ ಮಾತನಾಡಿ, ವರ್ಗಾವಣೆ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗುತ್ತಿದೆ. ಒಂದು ಸ್ಥಳದಲ್ಲಿ ನಿರ್ದಿಷ್ಟ ವರ್ಷಗಳ ಕಾಲ ಕೆಲಸ ಮಾಡಿದ ನಂತರ, ಮೂರು ಆಯ್ಕೆಗಳನ್ನು ನೀಡಿ ವರ್ಗಾವಣೆ ಮಾಡಬೇಕಾಗುತ್ತದೆ. ಆದರೆ ಇದನ್ನು ಪಾಲಿಸುತ್ತಿಲ್ಲ. ಬ್ಯಾಂಕ್ನಲ್ಲಿ ಈಗ ಕಾಯಂ ನೌಕರರು ಹಾಗೂ ಗುತ್ತಿಗೆ ನೌಕರರು ಇಬ್ಬರೂ ಇದ್ದಾರೆ, ಕಾಯಂ ನೌಕರರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.