‘1998ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿಯಲ್ಲಿ ಕರೀಗೌಡ ಅವರು ಉಪವಿಭಾಗಾಧಿಕಾರಿಯಾಗಿ ಹಾಗೂ ನಾಗರಾಜ್ ಅವರು ತಹಶೀಲ್ದಾರ್ ಆಗಿ ಆಯ್ಕೆಯಾದರು. ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಹಲವರು ಹೈಕೋರ್ಟ್ ಮೆಟ್ಟಿಲೇರಿದ್ದರು. ನೇಮಕಾತಿ ಪ್ರಕ್ರಿಯೆಯೇ ಅಸಂವಿಧಾನಿಕ ಎಂದು ತೀರ್ಪು ನೀಡಿದೆ. ಈ ಅಕ್ರಮದ ಲಾಭವನ್ನು ಪಡೆದವರಲ್ಲಿ ಕರೀಗೌಡ ಒಬ್ಬರು ಎಂದು ಸತ್ಯಶೋಧನಾ ಸಮಿತಿ ವರದಿ ಸಲ್ಲಿಸಿದೆ. ಇಂತಹ ಭ್ರಷ್ಟ ಅಧಿಕಾರಿಯನ್ನು ನೇಮಕ ಮಾಡಬಾರದು’ ಎಂದು ಸಮಿತಿಯ ಅಧ್ಯಕ್ಷ ಎಸ್.ಶಿವಕುಮಾರ್, ಸಮಾಜ ಪರಿವರ್ತನಾ ಟ್ರಸ್ಟ್ನ ಸಂಸ್ಥಾಪಕ ಎಸ್.ಆರ್.ಹಿರೇಮಠ, ಜನಸಂಗ್ರಾಮ ಪರಿಷತ್ನ ಕಾರ್ಯಾಧ್ಯಕ್ಷ ದೀಪಕ್ ಸಿ.ಎನ್. ಆಗ್ರಹಿಸಿದ್ದಾರೆ.