ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾದ 110 ಹಳ್ಳಿಗಳಿಗೆ ಕಾವೇರಿ ನೀರು ಒದಗಿಸುವ ಯೋಜನೆಯ ಕಾಮಗಾರಿಯನ್ನು ಒಂದೂವರೆ ವರ್ಷಗಳ ಹಿಂದೆ ಆರಂಭಿಸಲಾಗಿತ್ತು. ಇದಕ್ಕಾಗಿ ಕೆ.ಚನ್ನಸಂದ್ರದಿಂದ ಹೊರಮಾವು ವರ್ತುಲ ರಸ್ತೆಯವರೆಗೆ ರಸ್ತೆಯನ್ನು ಅಗೆಯಲಾಗಿತ್ತು. ಕಾಮಗಾರಿ ಮುಗಿದಿದ್ದರೂ ರಸ್ತೆಯನ್ನು ಮರುನಿರ್ಮಾಣ ಮಾಡಿಲ್ಲ. ಇದರಿಂದಾಗಿ, ಪ್ರತಿ ಬಾರಿ ಮಳೆ ಸುರಿದಾಗಲೆಲ್ಲಾ ಗುಂಡಿಗಳು ನಿರ್ಮಾಣವಾಗುತ್ತಿವೆ. ದ್ವಿಚಕ್ರ ವಾಹನ ಸವಾರರು ಗುಂಡಿಗಳಿಗೆ ಬಿದ್ದು ಗಾಯಗೊಳ್ಳುವುದು ಸಾಮಾನ್ಯವಾಗಿದೆ.