ಬೆಂಗಳೂರು: ‘ಎಲ್ಲರೂ ಸಮಾನವಾಗಿ ಬದುಕಬೇಕು ಎಂಬ ಉದ್ದೇಶದಿಂದ ಶಿಕ್ಷಣ ಕ್ಷೇತ್ರದಲ್ಲೂ ದಲಿತ ಮಕ್ಕಳು ಓದಲು ಅವಕಾಶ ಕಲ್ಪಿಸಿಕೊಟ್ಟಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್. ನಮ್ಮ ಸಮುದಾಯಕ್ಕೆ ಅವರ ಕೊಡುಗೆ ಅಪಾರ’ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅಭಿಪ್ರಾಯಪಟ್ಟರು.
ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಡಾ.ಎಂ. ವೆಂಕಟಸ್ವಾಮಿ ಅಭಿನಂದನಾ ಗ್ರಂಥ ಬಿಡುಗಡೆ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಡಾ. ಬಿ.ಆರ್. ಅಂಬೇಡ್ಕರ್ ಆಶಯದಂತೆ ಸಮಾನತೆ ಸಿಗುವವರೆಗೂ ದಲಿತ ಸಮುದಾಯ ಸದಾ ಹೋರಾಟ ನಡೆಸುತ್ತಿರಬೇಕು’ ಎಂದು ಸಲಹೆ ನೀಡಿದರು.