2013ರ ವಿಧಾನಸಭೆ ಚುನಾವಣೆ ವೇಳೆ ಶಿವಮೊಗ್ಗ ವಿಪ್ರ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈಶ್ವರಪ್ಪ ‘ಬ್ರಾಹ್ಮಣರ ಹೆಣ್ಣುಮಕ್ಕಳನ್ನು ಅಲ್ಪಸಂಖ್ಯಾತ ಸಮುದಾಯದ ಹುಡುಗರು ಹೊತ್ತುಕೊಂಡು ಹೋಗುತ್ತಾರೆ ಎಂದಿದ್ದಾರೆ. ಆ ಮೂಲಕ ಚುನಾವಣೆ ವೇಳೆ ದ್ವೇಷ ಭಾವನೆ ಮೂಡಿಸಲು ಪ್ರಯತ್ನಿಸಿದ್ದಾರೆ’ ಎಂದು ಆರೋಪಿಸಿ ಕೋಟೆ ಪೊಲೀಸ್ ಠಾಣೆಯಲ್ಲಿಚುನಾವಣಾಧಿಕಾರಿಗಳು ದೂರು ದಾಖಲಿಸಿದ್ದರು. ತನಿಖೆ ಪೂರ್ಣಗೊಂಡು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.