<p><strong>ಬೆಂಗಳೂರು:</strong> ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಫೆ.4ರಿಂದ ಕಾರ್ಯಕ್ರಮಗಳು ಆರಂಭವಾಗಿವೆ.</p>.<p class="Subhead">ಬೀದಿ ನಾಟಕಗಳು:ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ‘ಬದುಕಿ–ಬದುಕಿಸಿ’, ಕೆಂಪೇಗೌಡ ಬಸ್ ನಿಲ್ದಾಣದ ವಿಭಾಗದ ವತಿಯಿಂದ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ‘ರಸ್ತೆ ಸುರಕ್ಷತೆ–ಜೀವನರಕ್ಷೆ’ ಎಂಬ ಬೀದಿ ನಾಟಕ ಪ್ರದರ್ಶನಗೊಂಡಿತು.</p>.<p>ಬೆಂಗಳೂರು ಕೇಂದ್ರೀಯ ವಿಭಾಗ ಮತ್ತು ಸಂಚಾರ ಪೊಲೀಸ್ ವಿಭಾಗದ ಸಹಯೋಗದಲ್ಲಿ ಕಾಲ್ನಡಿಗೆ ಜಾಥಾ ನಡೆಯಿತು.‘ನಿಧಾನ...ನಿಮ<br />ಗಾಗಿ ಕಾಯುತ್ತಿದ್ದಾರೆ ನಿಮ್ಮವರು’ ಶೀರ್ಷಿಕೆಯ ಮಾಹಿತಿ ಕೈಪಿಡಿ ಬಿಡುಗಡೆ ಮಾಡಲಾಯಿತು.</p>.<p>‘ನಿಗಮದ 17 ವಿಭಾಗಗಳಲ್ಲಿ ಈ ಸಪ್ತಾಹ ಆಚರಿಸಲಾಗುತ್ತಿದೆ. ಅದಕ್ಕಾಗಿ ಪ್ರತಿ ಘಟಕಕ್ಕೆ ₹25 ಸಾವಿರ ನೀಡಲಾಗಿದೆ. ಅಪಘಾತ ಹಿನ್ನೆಲೆಯಿರುವ ಚಾಲಕರನ್ನು ಗುರುತಿಸಿ, ನಿಗಮದ ತರಬೇತಿ ಕೇಂದ್ರಗಳಲ್ಲಿ ತೀವ್ರ ತರಬೇತಿ ನೀಡಲಾಗುತ್ತಿದೆ’ ಎಂದು ನಿಗಮದ ಅಧಿಕಾರಿಗಳು ತಿಳಿಸಿದರು.</p>.<p>ಪೊಲೀಸ್, ಆರ್ಟಿಒ ಅಧಿಕಾರಿಗಳು, ವೋಲ್ವೋ, ಅರವಿಂದ್ ಮೋಟಾರ್ಸ್, ಟಾಟಾ, ಅಶೋಕ್ ಲೇಲ್ಯಾಂಡ್ ಕಂಪನಿಗಳ ಪರಿಣತರಿಂದ ತರಬೇತಿ ನಡೆಯಿತು. ನಿಗಮದ ಮಂಡ್ಯ, ಕೋಲಾರ, ಚಿಕ್ಕಮಗಳೂರು ವಿಭಾಗಗಳಲ್ಲಿ ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕ ಪ್ರದಾನ ಮಾಡಲಾಯಿತು.</p>.<p>‘ರಸ್ತೆ ಸುರಕ್ಷತಾ ಸಪ್ತಾಹ ಕೇವಲ ಕಾರ್ಯಕ್ರಮಕ್ಕೆ ಚಾಲನೆ ನೀಡುವುದರಲ್ಲಿಯೇ ಅರ್ಥಕಳೆದುಕೊಳ್ಳಬಾರದು. ಅದರ ಉದ್ದೇಶ ಹಾಗೂ ಅನುಷ್ಠಾನದಲ್ಲಿ ಸಂಸ್ಥೆಯ ಸಿಬ್ಬಂದಿ ಹಾಗೂ ಸಾರ್ವಜನಿಕರ ಪಾತ್ರ ಮುಖ್ಯ’ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಫೆ.4ರಿಂದ ಕಾರ್ಯಕ್ರಮಗಳು ಆರಂಭವಾಗಿವೆ.</p>.<p class="Subhead">ಬೀದಿ ನಾಟಕಗಳು:ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ‘ಬದುಕಿ–ಬದುಕಿಸಿ’, ಕೆಂಪೇಗೌಡ ಬಸ್ ನಿಲ್ದಾಣದ ವಿಭಾಗದ ವತಿಯಿಂದ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ‘ರಸ್ತೆ ಸುರಕ್ಷತೆ–ಜೀವನರಕ್ಷೆ’ ಎಂಬ ಬೀದಿ ನಾಟಕ ಪ್ರದರ್ಶನಗೊಂಡಿತು.</p>.<p>ಬೆಂಗಳೂರು ಕೇಂದ್ರೀಯ ವಿಭಾಗ ಮತ್ತು ಸಂಚಾರ ಪೊಲೀಸ್ ವಿಭಾಗದ ಸಹಯೋಗದಲ್ಲಿ ಕಾಲ್ನಡಿಗೆ ಜಾಥಾ ನಡೆಯಿತು.‘ನಿಧಾನ...ನಿಮ<br />ಗಾಗಿ ಕಾಯುತ್ತಿದ್ದಾರೆ ನಿಮ್ಮವರು’ ಶೀರ್ಷಿಕೆಯ ಮಾಹಿತಿ ಕೈಪಿಡಿ ಬಿಡುಗಡೆ ಮಾಡಲಾಯಿತು.</p>.<p>‘ನಿಗಮದ 17 ವಿಭಾಗಗಳಲ್ಲಿ ಈ ಸಪ್ತಾಹ ಆಚರಿಸಲಾಗುತ್ತಿದೆ. ಅದಕ್ಕಾಗಿ ಪ್ರತಿ ಘಟಕಕ್ಕೆ ₹25 ಸಾವಿರ ನೀಡಲಾಗಿದೆ. ಅಪಘಾತ ಹಿನ್ನೆಲೆಯಿರುವ ಚಾಲಕರನ್ನು ಗುರುತಿಸಿ, ನಿಗಮದ ತರಬೇತಿ ಕೇಂದ್ರಗಳಲ್ಲಿ ತೀವ್ರ ತರಬೇತಿ ನೀಡಲಾಗುತ್ತಿದೆ’ ಎಂದು ನಿಗಮದ ಅಧಿಕಾರಿಗಳು ತಿಳಿಸಿದರು.</p>.<p>ಪೊಲೀಸ್, ಆರ್ಟಿಒ ಅಧಿಕಾರಿಗಳು, ವೋಲ್ವೋ, ಅರವಿಂದ್ ಮೋಟಾರ್ಸ್, ಟಾಟಾ, ಅಶೋಕ್ ಲೇಲ್ಯಾಂಡ್ ಕಂಪನಿಗಳ ಪರಿಣತರಿಂದ ತರಬೇತಿ ನಡೆಯಿತು. ನಿಗಮದ ಮಂಡ್ಯ, ಕೋಲಾರ, ಚಿಕ್ಕಮಗಳೂರು ವಿಭಾಗಗಳಲ್ಲಿ ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕ ಪ್ರದಾನ ಮಾಡಲಾಯಿತು.</p>.<p>‘ರಸ್ತೆ ಸುರಕ್ಷತಾ ಸಪ್ತಾಹ ಕೇವಲ ಕಾರ್ಯಕ್ರಮಕ್ಕೆ ಚಾಲನೆ ನೀಡುವುದರಲ್ಲಿಯೇ ಅರ್ಥಕಳೆದುಕೊಳ್ಳಬಾರದು. ಅದರ ಉದ್ದೇಶ ಹಾಗೂ ಅನುಷ್ಠಾನದಲ್ಲಿ ಸಂಸ್ಥೆಯ ಸಿಬ್ಬಂದಿ ಹಾಗೂ ಸಾರ್ವಜನಿಕರ ಪಾತ್ರ ಮುಖ್ಯ’ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>