ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಆರ್‌ಟಿಸಿ: ಅಂಚೆ ಮತದಾನ ಸುಲಭಕ್ಕೆ ವ್ಯವಸ್ಥೆ

Last Updated 20 ಮಾರ್ಚ್ 2019, 20:13 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌ ಚಾಲಕರು ಮತ್ತು ನಿರ್ವಾಹಕರ ಅಂಚೆ ಮತದಾನ ಸುಗಮಕ್ಕೆ ಇದೇ ಮೊದಲ ಬಾರಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿದೆ.

ಕರ್ತವ್ಯದಲ್ಲಿರುವ ಸಿಬ್ಬಂದಿಗೆಅಂಚೆ ಮತಪತ್ರಗಳು ಸಿಗುವಂತೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ. ನೋಡಲ್ ಅಧಿಕಾರಿಗಳ ಬಳಿಯೇ ಮತ ಪತ್ರಗಳನ್ನು ವಾಪಸ್ ನೀಡಬಹುದಾಗಿದೆ. ನಿಗಮದ ವ್ಯವಸ್ಥಾಪಕ ನಿರ್ದೇಶಕರು ಘೋಷಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ, ಕೆಂಪೇಗೌಡ ಬಸ್ ನಿಲ್ದಾಣ, ಎಲ್ಲ ವಿಭಾಗಗಳು, ಪ್ರಾದೇಶಿಕ ಕಾರ್ಯಾಗಾರಗಳಿಗೆ ತಲಾ ಒಬ್ಬರಂತೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ನಿಗಮ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT