<p><strong>ಬೆಂಗಳೂರು:</strong> ಬಸ್ ನಿಲ್ದಾಣಗಳಲ್ಲಿ ಸಂಭವನೀಯ ಅನಾಹುತಗಳನ್ನು ತಪ್ಪಿಸಲು ವಿಭಾಗಮಟ್ಟದಲ್ಲಿ ‘ತುರ್ತು ಸ್ಪಂದನಾ ದಳ’ ರಚಿಸಲಾಗಿದೆ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದ್ದಾರೆ.</p>.<p>‘ವಿಭಾಗಮಟ್ಟದಲ್ಲಿ ರಚಿಸಿದ ದಳದ ಕಾರ್ಯ ಚಟುವಟಿಕೆಯನ್ನು ಕೇಂದ್ರ ಕಚೇರಿಮಟ್ಟದಲ್ಲಿ ರಚಿಸಿದ ವಿಶೇಷ ತಂಡ ಮೇಲ್ವಿಚಾರಣೆ ಮಾಡಲಿದೆ’ ಎಂದೂ ಅವರು ಹೇಳಿದ್ದಾರೆ.</p>.<p>ವಿಭಾಗೀಯ ನಿಯಂತ್ರಣಾಧಿಕಾರಿಗಳ ನೇತೃತ್ವದಲ್ಲಿ ಆಯಾ ವಿಭಾಗದ ಭದ್ರತಾ ಸಿಬ್ಬಂದಿಯನ್ನು ಒಳಗೊಂಡ ದಳ ಬಸ್ ನಿಲ್ದಾಣಗಳಲ್ಲಿ ನಿರಂತರ ಗಸ್ತು ತಿರುಗಲಿದೆ. ಈ ದಳದ ಜೊತೆ ಆಯಾ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಲಿದ್ದಾರೆ ಎಂದೂ ಅವರು ಹೇಳಿದ್ದಾರೆ.</p>.<p>‘ಬಸ್ ನಿಲ್ದಾಣಗಳಲ್ಲಿ ಅನುಮಾನಾಸ್ಪದ ವಸ್ತುಗಳು ಪತ್ತೆಯಾದರೆ ನಿಗಮದ ಅಧಿಕಾರಿಗಳ ಗಮನಕ್ಕೆ ತರಬೇಕು’ ಎಂದೂ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಸ್ ನಿಲ್ದಾಣಗಳಲ್ಲಿ ಸಂಭವನೀಯ ಅನಾಹುತಗಳನ್ನು ತಪ್ಪಿಸಲು ವಿಭಾಗಮಟ್ಟದಲ್ಲಿ ‘ತುರ್ತು ಸ್ಪಂದನಾ ದಳ’ ರಚಿಸಲಾಗಿದೆ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದ್ದಾರೆ.</p>.<p>‘ವಿಭಾಗಮಟ್ಟದಲ್ಲಿ ರಚಿಸಿದ ದಳದ ಕಾರ್ಯ ಚಟುವಟಿಕೆಯನ್ನು ಕೇಂದ್ರ ಕಚೇರಿಮಟ್ಟದಲ್ಲಿ ರಚಿಸಿದ ವಿಶೇಷ ತಂಡ ಮೇಲ್ವಿಚಾರಣೆ ಮಾಡಲಿದೆ’ ಎಂದೂ ಅವರು ಹೇಳಿದ್ದಾರೆ.</p>.<p>ವಿಭಾಗೀಯ ನಿಯಂತ್ರಣಾಧಿಕಾರಿಗಳ ನೇತೃತ್ವದಲ್ಲಿ ಆಯಾ ವಿಭಾಗದ ಭದ್ರತಾ ಸಿಬ್ಬಂದಿಯನ್ನು ಒಳಗೊಂಡ ದಳ ಬಸ್ ನಿಲ್ದಾಣಗಳಲ್ಲಿ ನಿರಂತರ ಗಸ್ತು ತಿರುಗಲಿದೆ. ಈ ದಳದ ಜೊತೆ ಆಯಾ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಲಿದ್ದಾರೆ ಎಂದೂ ಅವರು ಹೇಳಿದ್ದಾರೆ.</p>.<p>‘ಬಸ್ ನಿಲ್ದಾಣಗಳಲ್ಲಿ ಅನುಮಾನಾಸ್ಪದ ವಸ್ತುಗಳು ಪತ್ತೆಯಾದರೆ ನಿಗಮದ ಅಧಿಕಾರಿಗಳ ಗಮನಕ್ಕೆ ತರಬೇಕು’ ಎಂದೂ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>