‘ಕ್ಷೇತ್ರದಲ್ಲಿ ಭ್ರಷ್ಟಾಚಾರ ಹಾಗೂ ಗೂಂಡಾಗಿರಿ ವಿರುದ್ಧ ಸತ್ಯಕ್ಕೆ ಮತ್ತೊಂದು ಜಯ ದೊರೆತಿದೆ. ಮತದಾರರು ನನ್ನ ಮೇಲೆ ವಿಶ್ವಾಸವಿಟ್ಟು ಆಶೀರ್ವಾದ ಮಾಡಿದ್ದಾರೆ. ಅವರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ನಡೆದುಕೊಳ್ಳುತ್ತೇನೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ’ ಎಂದು ಕಾಗವಾಡದ ವಿಜೇತ ಅಭ್ಯರ್ಥಿ, ಬಿಜೆಪಿಯ ಶ್ರೀಮಂತ ಪಾಟೀಲ ಪ್ರತಿಕ್ರಿಯಿಸಿದರು.